January 11, 2026

ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ : ಬಿ ವೈ ರಾಘವೇಂದ್ರ

ಶಿವಮೊಗ್ಗ : ನಗರದ ವಿಮಾನ ನಿಲ್ದಾಣದಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ.  ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ.

ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಟಕ್ಕೆ ನಿರ್ಧರಿಸಲಾಗಿದೆ ಎಂದರು.
ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಐದು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ. ಉಡಾನ್ ಯೋಜನೆ ಅಡಿ ಈ ಮಾರ್ಗಗಳನ್ನು ಸೂಚಿಸಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಮತ್ತು ಕೈಗಾರಿಕೋದ್ಯಮ ಅಭಿವೃದ್ಧಿಯನ್ನು ಗಮನದಲ್ಲಿ ಇರಿಸಿಕೊಂಡು ಈ ಮಾರ್ಗಗಳನ್ನು ನಿರ್ಧರಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸೆಪ್ಟೆಂಬರ್ 13ರೊಳಗೆ ಅಂತಿಮ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸಂಸದರು ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *