Breaking
12 Jan 2026, Mon

ಕುಂಸಿ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಕುಂಸಿ : ಪಟ್ಟಣದ ಇಂದಿರಾ ಕಾಲೋನಿ ಮೊದಲ ಕ್ರಾಸ್ ಬಳಿ ಅಕ್ರಮವಾಗಿ ಎರಡು ಎತ್ತುಗಳು ಒಂದು ಆಕಳು ಮತ್ತು 3 ಕೋಣಗಳನ್ನು ಶಿವಮೊಗ್ಗದ ಕಸಾಯಿಖಾನೆಗೆ ಸಾಗಿಸುವಾಗ ಪೊಲೀಸರು ತಡೆದು ಮೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ.

ಸಾಗರ ರಸ್ತೆಯಲ್ಲಿ ಜಾನುವಾರುಗಳನ್ನು  KA 14 B 0941 ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದಲ್ಲಿ ತುಂಬಿಸಿಕೊಂಡು ಶಿವಮೊಗ್ಗದ ಕಡೆ ಹೋಗುವಾಗ ಗಸ್ತಿನಲ್ಲಿರುವ ಪೊಲೀಸರು ತಡೆದು ವಿಚಾರಿಸಲು ಹೋದಾಗ ಪೊಲೀಸರನ್ನು ಕಂಡು ವಾಹನದ ಚಾಲಕ ಕುಂಸಿಯ ಇಂದಿರಾ ಕಾಲೋನಿಯ ಮೊದಲ ಕ್ರಾಸ್ ಕಡೆ ತಿರುಗಿಸಿದ್ದಾನೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆಯ ಚರಂಡಿ ಪಕ್ಕದಲ್ಲಿದ್ದ ಮಣ್ಣಿನ ದಿಬ್ಬದಲ್ಲಿ ವಾಹನ ಸಿಕ್ಕಿಕೊಂಡಿದೆ.
ವಾಹನವನ್ನ ನಿಲ್ಲಿಸಿ ಅದರಲ್ಲಿದ್ದ ಇಬ್ಬರು ಪರಾರಿಯಾಗಿದ್ದು ಒಬ್ಬ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಈತ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನ ವಾಸಿ ಮಹಮ್ನದ್ ಇಸ್ತಾಕ್ ಜಮೀಲ್ ಎಂದು ತಿಳಿದುಬಂದಿದೆ.

ವಾಹನದಲ್ಲಿ ಆಕಳು ಎತ್ತು ಮತ್ತು ಕೋಣಗಳನ್ನ ಅವೈಜ್ಞಾನಿಕವಾಗಿ ಒತ್ತೊತ್ತಾಗಿ ಕಟ್ಟಿಹಾಕಿದ್ದು ಒಂದು ಎತ್ತಿನ ಕೊಂಬು ಮುರಿದು ರಕ್ತ ಸೋರುತ್ತಿತ್ತು. 

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *