Categories: Blog

ಅವಿದ್ಯಾವಂತರು ದೇಶಕ್ಕೆ ಹೊರೆ ಎಂಬ ಅಮಿತ್ ಶಾ ಹೇಳಿಕೆಗೆ ಖಂಡನೆ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ. ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ ಎಂಬ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಜೆಡಿಎಸ್ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಖಂಡಿಸಿದ್ದಾರೆ.

ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ್‌ ಟಿವಿಗೆ ಅಮಿತ್‌ ಶಾ ಸಂದರ್ಶನದ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ ಪ್ರಜೆ ಹೇಗೆ ಆಗುತ್ತಾನೆ ಎಂದಿದ್ದರು.

ಈ  ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಇಂತಹ ಹೇಳಿಕೆ ದೇಶದಲ್ಲಿ ಇರುವ ಅನಕ್ಷರಸ್ತರಿಗೆ ಮಾಡಿದ ಅಗೌರವವಾಗಿದೆ.ಇದೊಂದು ಸಂಪೂರ್ಣವಾದ ಬೇಜವಾಬ್ದಾರಿ ಹೇಳಿಕೆ,ಒಬ್ಬ ದೇಶದ ಗೃಹ ಮಂತ್ರಿಯಾಗಿ ಇಂತಹ ಕೀಳುಮಟ್ಟದ ಹೇಳಿಕೆ ನೀಡಬಾರದು.ಸುಮಾರು 40 ವರ್ಷಗಳ ಹಿಂದೆ ಜನಜೀವನ ಹೇಗಿತ್ತು ಎನ್ನುವುದನ್ನು ಅವರು ತಿಳಿದುಕೊಳ್ಳುವುದು ಸೂಕ್ತ ಹಾಗೇಯೆ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ದೇವರಾಜ್ ಅರಸ್ ರವರು ರೈತರು ಹಾಗೂ ಅನಕ್ಷರಸ್ಥರು ಈ ದೇಶದ ಜೀವನಾಡಿ ಎಂದಿದ್ದರು.

ಹಿಂದಿನ ಕಾಲದಲ್ಲಿ ಜನ ಜೀವನ ನಡೆಸುವುದೇ ಕಷ್ಟಕರವಾಗಿತ್ತು ಅಂತಹ ಸಂಧರ್ಭದಲ್ಲಿ ವಿಧ್ಯಾಭ್ಯಾಸ ಕೈಗೆಟುವ ಹಾಗೆ ಇರಲಿಲ್ಲ. ಚರಿತ್ರೆಯನ್ನು ತಿಳಿದು ಮಾತನಾಡಬೇಕಾಗಿರುವ ದೇಶದ ಗೃಹ ಸಚಿವರು ಸಾರಾಸಗಟಾಗಿ ದೇಶದ ಅವಿದ್ಯಾವಂತರನ್ನು ದೇಶಕ್ಕೆ ಹೊರೆ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ದೇಶದ ಪ್ರಸ್ತುತ ಸಮಸ್ಯೆಗಳಾದ ಬೆಲೆ ಏರಿಕೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಈ ತರಹ ಬೇಜವಬ್ದಾರಿ ಹೇಳಿಕೆ ನೀಡುತ್ತಲೇ ಕಾಲಾಹರಣ ಮಾಡುತ್ತಿದ್ದಾರೆ ಎಂದು ಈ ಸಂಧರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

39 minutes ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

48 minutes ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

1 hour ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

8 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

12 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

12 hours ago