ಶಿವಮೊಗ್ಗ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು ಕನ್ನಡದ ವಿಶೇಷ ಮೂರು ಗೀತೆಗಳನ್ನು ಹಾಡಿದ್ದು, ಇತಿಹಾಸ ಸೃಷ್ಟಿಸಿದ ದಿನವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ತಿಳಿಸಿದ್ದಾರೆ.
ಇಂದು ನಗರದಲ್ಲಿ ನಡೆದ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಎಂದು ನಡೆದ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ರಾಜ್ಯದ ಇತಿಹಾಸದಲ್ಲಿ ಈ ದಿನವನ್ನು ನೆನಪಿಟ್ಟುಕೊಳ್ಳಬೇಕು. ಈ ಯಶಸ್ವಿ ಕಾರ್ಯಕ್ರಮಕ್ಕೆ ಕಾರಣರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ 5 ಲಕ್ಷ ಜನರು ಏಕ ಕಾಲದಲ್ಲಿ ಕನ್ನಡದ ವಿಶೇಷ ಗೀತೆಯನ್ನು ಸಾಮೂಹಿಕವಾಗಿ ಹಾಡಿರುವುದು ಇತಿಹಾಸ ಸೃಷ್ಟಿಸಿದ ದಿನವಾಗಿದೆ ಎಂದರು.
ಬರುವಂತಹ ಎಲ್ಲ ದಿನವನ್ನು ಕನ್ನಡ ಅಭಿವೃದ್ದಿಗೆ ಶ್ರಮ ಹಾಕೋಣ. ಅದರ ಮೂಲಕ ಕರ್ನಾಟಕವನ್ನು ಎಲ್ಲ ಕ್ಷೇತ್ರದಲ್ಲೂ ಮೊದಲನೆ ಸ್ಥಾನಕ್ಕೆ ತೆಗೆದುಕೊಂಡು ಹೋಗೋಣ. ಇಂದು ಹಾಡಿದಂತೆ ಒಟ್ಟಾಗಿ ಇರೋಣ ಎಂದು ಶುಭ ಹಾರೈಸಿದರು.
*ಅಣ್ಣಾವ್ರಾ ಧ್ವನಿಯೇ ಬರಬೇಕಾಯಿತು*
ಇಂದು ಜಿಲ್ಲಾಧಿಕಾರಿಗಳ ಕಚೇರಿಗಳ ಎದುರು ನಡೆದ ಲಕ್ಷ ಕಂಠ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಮೊದಲ ಎರಡು ಗೀತೆಯನ್ನು ಚೆನ್ನಾಗಿಯೇ ಹಾಡಲಾಯಿತು. ಆದರೆ, ಕೊನೆಯ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಯನ್ನು ಮೊದಲು ಸರಿಯಾಗಿ ಹಾಡಲಿಲ್ಲ. ನಂತರ ಡಾ. ರಾಜ್ ಕುಮಾರ್ ಅವರ ಹಾಡನ್ನು ಹಾಕಲಾಯಿತು. ಆಗ ಎಲ್ಲರೂ ಸರಿಯಾಗಿ ಗಾಯನ ಮಾಡಿದರು. ಈ ವೇಳೆ, ಕನ್ನಡ ನಾಡು ನುಡಿಯ ಪ್ರತಿಜ್ಞಾವಿಧಿ ಸಂಕಲ್ಪ ಸ್ವೀಕರಿಸಲಾಯಿತು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್