ಶಿರಸಿ : ಐದು ಕೋಟಿ ಮೌಲ್ಯದ ನಿರ್ಬಂಧಿತ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ.
ಡಿ.ವೈ.ಎಸ್.ಪಿ ರವಿ ಡಿ ನಾಯ್ಕ ರವರ ನೇತ್ರತ್ವದಲ್ಲಿ ಸಿಪಿಐ ರಾಮಚಂದ್ರ ನಾಯಕ್ ,ಪಿ.ಎಸ್.ಐ ಭೀಮಾಶಂಕರ್ ,ಪಿ.ಎಸ್.ಐ ಈರಯ್ಯ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಐದು ಕೋಟಿ ಮೌಲ್ಯದ ಐದು ಕೆಜಿ ತಿಮಿಂಗಿಲದ ವಾಂತಿ (ಅಂಬೆ ಗ್ರೀಸ್) ಅನ್ನು ವಶಕ್ಕೆ ಪಡೆಯಲಾಗಿದೆ.
ಬೆಳಗಾವಿ ಮೂಲದ ಸಂತೋಷ್ ಕಾಮತ್ ,ಶಿರಸಿಯ ರಾಜೇಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದು,ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
::::ತಿಮಿಂಗಿಲ ವಾಂತಿ ಏನಿದು ?:::::
ಸಮುದ್ರದಲ್ಲಿ ತಿಮಿಂಗಿಲವು ತಿಂದ ಆಹಾರವು ಜೀರ್ಣಿಸಿಕೊಳ್ಳಲಾಗದೇ ಮರಳಿ ಅವುಗಳನ್ನು ಹೊರಕಕ್ಕುತ್ತವೆ. ಈ ಹೊರಕಕ್ಕಿದ ಆಹಾರವು ದ್ರವರೂಪದಲ್ಲಿ ಗಟ್ಟಿಯಾಗಿರುತ್ತದೆ. ಇದಕ್ಕೆ ಅಂಬರ್ ಗ್ರೀಸ್ ಎಂದು ವೈಜ್ಞಾನಿಕವಾಗಿ ಕರೆಯಲಾಗುತ್ತದೆ.
ಈ ದ್ರವರೂಪದ ಗಟ್ಟಿಯಾದ ವಸ್ತುವು ಮೊದಲು ಸಮುದ್ರದಾಳದಲ್ಲಿ ಇದ್ದು ನಂತರ ಕೆಲವು ರಾಸಾಯನಿಕ ಕ್ರಿಯೆಯ ಮೂಲಕ ಸಮುದ್ರದಲ್ಲಿ ತೇಲುತ್ತವೆ.
ಹೀಗೆ ತೇಲಿದ ತಿಮಿಂಗಿಲದ ವಾಂತಿಯು ಅತೀ ಅಮುಲ್ಯವಾಗಿದ್ದು ಕೆಟ್ಟ ವಾಸನೆ ಇದ್ದರೂ ಸಹ ಇದು ಕೋಟಿಗಟ್ಟಲೇ ಬೆಲೆಬಾಳುತ್ತದೆ.
ಅರಣ್ಯ ಕಾಯ್ದೆಯಡಿ ಈ ತಿಮಿಂಗಿಲದ ವಾಂತಿ ಯನ್ನು ಮಾರಾಟಮಾಡುವುದು ಭಾರತದಲ್ಲಿ ಸಂಪೂರ್ಣ ನಿರ್ಬಂಧಿಸಲಾಗಿದೆ.
:::ತಿಮಿಂಗಿಲ ವಾಂತಿಗೆ ಕೋಟಿ ಕೋಟಿ:::
ಈ ತಿಮಿಂಗಿಲದ ವಾಂತಿ ಅಪರೂಪದ್ದಾಗಿದೆ. ಇವುಗಳನ್ನು ಹೊರದೇಶಗಳಲ್ಲಿ ಸುಗಂದ ದ್ರವ್ಯ ತಯಾರಿಸಲು ಬಳಸಲಾಗುತ್ತದೆ. ಇದರಿಂದ ತಯಾರಾದ ಸುಗಂಧ ದ್ರವ್ಯಕ್ಕೆ ಗಲ್ಛ್ ರಾಷ್ಟ್ರಗಳಲ್ಲಿ ಹೆಚ್ಚಿನ ಬೇಡಿಕೆ ಸಹ ಇದೆ.
ಹಲವು ದೇಶದಲ್ಲಿ ತಿಮಿಂಗಿಲದ ವಾಂತಿ ಮಾರಾಟಕ್ಕೆ ಅವಕಾಶಗಳಿವೆ. ಅತೀ ವಿರಳವಾಗಿ ಸಿಗುವುದರಿಂದ ಇವುಗಳಿಗೆ ಬೇಡಿಕೆ ಇದ್ದು ಭಾರತದಲ್ಲಿ ನಿರ್ಬಂಧ ಇರುವುದರಿಂದ ಮುಂಬೈ ಮೂಲಕ ಇತರೆ ದೇಶಗಳಿಗೆ ಇವುಗಳನ್ನು ಕಳ್ಳಹಾದಿಯಲ್ಲಿ ಸಾಗಿಸಿ ಹಣ ಸಂಪಾದಿಸುತ್ತಾರೆ.
ಜಿಲ್ಲೆಯಲ್ಲಿ ಈ ಹಿಂದೆ ಮುರುಡೇಶ್ವರದಲ್ಲಿ ಒಂದು ಕೆ.ಜಿಗೂ ಹೆಚ್ಚು ಮೌಲ್ಯದ ಅಂಬರ್ ಗ್ರೀಸ್ ಇತ್ತೀಚೆಗೆ ದೊರಕಿತ್ತು. ಇದನ್ನು ಅರಣ್ಯ ಇಲಾಖೆಗೆ ನೀಡಲಾಗಿತ್ತು.ಆದರೇ ಇದೀಗ ಐದು ಕೆಜಿ ಯಷ್ಟು ತೂಕದ ತಿಮಿಂಗಿಲದ ವಾಂತಿ ದೊರೆತಿದ್ದು ಇದೇ ಮೊದಲ ಘಟನೆಯಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್