ಶಿವಮೊಗ್ಗ: ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗೆ ಒಂದು ವಾರ ಬರುವಂತೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಹ್ವಾನಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ಸಂಘ- ಸಂಸ್ಥೆಯನ್ನು ಟೀಕೆ ಮಾಡುವ ಮುನ್ನ ಮೊದಲು ಅದರ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಕುಮಾರಸ್ವಾಮಿ ನಾಲ್ಕು ದಿನ ಶಾಖೆಗೆ ಬರಲಿ, ಆಮೇಲೆ ಸಂಘದ ಬಗ್ಗೆ ಟೀಕೆ ಮಾಡಲಿ. ಅವರು ಅಧಿಕಾರದಲ್ಲಿದ್ದಾಗ ಅವರ ಕುಟುಂಬದವರಿಗೆ ಸಹಾಯ ಮಾಡಿಕೊಂಡು ಬಂದವರು. ಅವರಿಗೆ ರಾಷ್ಟ್ರಭಕ್ತಿ, ದೇಶದ ಪರಿಕಲ್ಪನೆ, ಚಿಂತನೆಗಳಿಲ್ಲ. ಪಾರ್ಟಿಯನ್ನೇ ಕುಟುಂಬ ರಾಜಕಾರಣಕ್ಕೆ ತಂದವರು, ಅವರಿಗೆ ಆರ್ಎಸ್ಎಸ್ ವಿಚಾರಧಾರೆಗಳೇನು ಅಂತ ತಿಳಿದಿಲ್ಲ. ಸಂಘ ಇಂದು ಸಂಸ್ಕಾರ, ದೇಶಭಕ್ತಿ ಸಾರುವ ಕೆಲಸ ಮಾಡುತ್ತಿದೆ ಎಂದು ಕಟೀಲ್ ಹೇಳಿದರು.
ಸಂಘ ವ್ಯಕ್ತಿ ನಿರ್ಮಾಣದ ಮೂಲಕ ದೇಶ ಕಟ್ಟುವ ಕೆಲಸ ಮಾಡುತ್ತಿದೆ. ಇವತ್ತು ರಾಷ್ಟ್ರಪತಿ, ಪ್ರಧಾನಮಂತ್ರಿ ಇಬ್ಬರೂ ಸ್ವಯಂಸೇವಕರೇ. ಜನತಾದಳದಲ್ಲೂ ಸ್ವಯಂಸೇವಕರಿದ್ದಾರೆ. ಕಾಂಗ್ರೆಸ್ನಲ್ಲೂ ಸಹ ಸ್ವಯಂ ಸೇವಕರಿದ್ದಾರೆ. ಇಂದು ಸಂಘ ಪ್ರವೇಶ ಮಾಡದ ಜಾಗವಿಲ್ಲ. ಅಧಿಕಾರಿಗಳನ್ನು ನಿರ್ಮಾಣ ಮಾಡಲು ಸಂಘ ಗುರಿ ಇಟ್ಟುಕೊಂಡಿಲ್ಲ, ಸಂಘ ರಾಷ್ಟ್ರ ನಿರ್ಮಾಣದ ಗುರಿಯನ್ನು ಇಟ್ಟುಕೊಂಡಿದೆ ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್