ಶಿವಮೊಗ್ಗ : ಗಾಂಜಾ ಗಿರಾಕಿಗಳಿಗೆ ಬಿಗ್ ಶಾಕ್ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಗಾಂಜಾ ಅಥವಾ ನಾರ್ಕೋಟಿಕ್ ವಸ್ತು ಸೇವಿಸಿದವರ ಮೂತ್ರ ಪರೀಕ್ಷೆ ನಡೆಸಿ ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ವಿಶೇಷ ಟೆಸ್ಟಿಂಗ್ ಕಿಟ್ ನ್ನ ಅಳವಡಿಸಿಕೊಳ್ಳುತ್ತಿದೆ.
ಈ ಮೊದಲು ಗಾಂಜಾ ಸೇವಿಸಿದವರ ರಕ್ತಪರೀಕ್ಷೆ, ಕೂದಲು ಪರೀಕ್ಷೆಗೆ ಒಳಪಡಿಸಿ ದಿನಗಟ್ಟಲೆ ಕಾಯುವ ಸ್ಥಿತಿ ಇತ್ತು. ಆದರೆ ಈಗ ಸಮಯವನ್ನ ಉಳಿಸುವ ಸಲುವಾಗಿ ಈ ವಿಶೇಷ ಟೆಸ್ಟಿಂಗ್ ಕಿಟ್ ನ್ನು ಬಳಸಲು ಪೊಲೀಸ್ ಇಲಾಖೆ ಸಿದ್ದವಾಗಿದೆ.ಮೆಗ್ಗಾನ್ ಆಸ್ಪತ್ರೆಯಲ್ಲಿ ಈ ಕಿಟ್ ಇರಿಸಲಾಗಿದೆ.
ಕೊರೋನ ಪರೀಕ್ಷೆ ನಡೆಸುವ ರಾಪಿಡ್ ಅಂಟಿಜೆಂಟ್ ಟೆಸ್ಟ್ ಮಾಡುವ ಕಾರ್ಯವೈಖರಿಯನ್ನೇ ಈ ವಿಶೇಷ ಟೆಸ್ಟಿಂಗ್ ಕಿಟ್ ಮಾಡಲಿದೆ. ಮಾದಕ ವಸ್ತು ಸೇವಿಸಿದವನ ಮೂತ್ರದ ಹುಂಡನ್ನ ಈ ಕಿಟ್ ನ ಪ್ಯಾಡ್ ಗೆ ಹಾಕಿದರೆ ಸಾಕು ಆತನ ಫಲಿತಾಂಶವನ್ನ ಕಿಟ್ ಕ್ಷಣಮಾತ್ರದಲ್ಲಿ ಹೇಳಿಬಿಡುತ್ತದೆ.
ಇದು ಬೆಂಗಳೂರಿನಲ್ಲಿ ಈಗಾಗಲೇ ಇದೆ. ಇದನ್ನ ಈಗ ಶಿವಮೊಗ್ಗದಲ್ಲಿ ಅಳವಡಿಸಿಕೊಳ್ಳಲಾಗುತ್ತದೆ.
ದೊಡ್ಡಪೇಟೆಯ ಇಬ್ಬರು ಆರೋಪಿತರನ್ನ ಇಂದು ಈ ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಆರೋಪ ಸಾಬೀತಾದರೆ 10 ಸಾವಿರ ರೂ.ದಂಡ 6 ತಿಂಗಳು ಕಾರಾಗೃಹ ಶಿಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್