Categories: Blog

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ ಬಿಡುಗಡೆ : ಕುವೆಂಪು ವಿವಿಯ ಬಿ ಜೆ ಗಿರೀಶ್, ಬಿಇ ಕುಮಾರಸ್ವಾಮಿಯವರಿಗೆ ಸ್ಥಾನ

ಶಿವಮೊಗ್ಗ : ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರ ತಂದಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವ ವಿದ್ಯಾಲಯದ ಡಾ. ಬಿ. ಜೆ ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿಯವರು ಸ್ಥಾನ ಪಡೆದಿದ್ದಾರೆ.

ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಡೇಟಾಬೇಸ್‌ ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.

ಸಂಶೋಧನಾ ತಂಡವು ವಿಶ್ವದ ಸಂಶೋಧಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕವಾಗಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಿದ್ದಾರೆ. ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿಜೀವಮಾನ ಸಾಧಕರು ಮತ್ತು 2021ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ.

2021ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 54804ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತವಿಜ್ಞಾನ ಸಹಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್‌ ವಿಷಯಗಳ ಕುರಿತ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇನ್ನು ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕ ಡಾ. ಬಿ. ಇ. ಕುಮಾರಸ್ವಾಮಿ 165713ನೇ ಸ್ಥಾನದಲ್ಲಿದ್ದಾರೆ.

ಈ ವರ್ಷದ ಪಟ್ಟಿಯಲ್ಲಿ ಭಾರತದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2042 ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 1900 ವಿಜ್ಞಾನಿಗಳು ಸ್ಥಾನ ಪಡೆದಿದ್ದರು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISc.) 114 ವಿಜ್ಞಾನಿಗಳು ಈ ಪಟ್ಟಿಯಲ್ಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ವಿವಿಯ ಸಂಶೋಧನಾ ಸಾಧನೆಗೆ ಪೂರಕವಾದ ಕಾರ್ಯ ಮಾಡುತ್ತಿರುವ ಈ ಇಬ್ಬರು ಅಧ್ಯಾಪಕರ ಸಾಧನೆಯು ಕುವೆಂಪು ವಿವಿಗೆ ಹೆಮ್ಮೆ ತಂದಿದೆ ಎಂದು ವಿವಿಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅವರು ಅಭಿನಂದಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

4 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

4 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

5 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago