ತೀರ್ಥಹಳ್ಳಿ : ತಾಲೂಕಿನ ಕಟ್ಟೆಹಕ್ಕಲಿನ ಪ್ರಾರ್ಥಮಿಕ ಶಾಲೆಯ ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನಡೆಸುತ್ತಿದ್ದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಅ. 26 ರಾತ್ರಿ ಶಾಲೆಯ ಸಮೀಪ ಕಾರಿನ ಮತ್ತು ಬೈಕಿನ ಮೇಲೆ ಕಟ್ಟೆಹಕ್ಲು ನಿವಾಸಿ ಸಂದೀಪ್ ಮಚ್ಚಿನಿಂದ ದಾಳಿ ನಡೆಸಿದ್ದಾನೆ.
ಬೆಂಗಳೂರಿನ ನಿವಾಸಿ ಮಹದೇವ ಪ್ರಸಾದ್ ಅವರು ಪತ್ನಿ, ಪತ್ನಿಯ ತಮ್ಮನ ಹೆಂಡತಿ, ದೊಡ್ಡಪ್ಪನ ಮಗ ಹಾಗೂ ಅವರ ಪತ್ನಿ ಯೊಂದಿಗೆ ಕಾರಿನಲ್ಲಿ ತೀರ್ಥಹಳ್ಳಿಗೆ ತಲುಪಿ ಕಟ್ಟೆಹಕ್ಲು ಮೂಲಕ ಹೆದ್ದೂರು ಹೊರಬೈಲಿಗೆ ಹೋಗುವಾಗ ಕಟ್ಟೆಹಕ್ಲುವಿನ ಶಾಲೆಯ ಬಳಿ ಸಂದೀಪ ದಿಡೀರನೆ ಅಡ್ಡಕಟ್ಟಿ ಮಚ್ಚು ಬೀಸಿದ್ದಾನೆ.
ಇದರಿಂದ ಕಾರಿನ ಹಿಂಬಾಗದ ಬ್ಯಾನಟ್, ಗ್ಲಾಜುಗಳು ಡ್ಯಾಮೇಜ್ ಆಗಿವೆ. ಇದೇರೀತಿ ದ್ವೀಚಕ್ರ ವಾಹನದಲ್ಲಿ ಬಂದ ಕೃಷ್ಣಮೂರ್ತಿ ಹಾಗೂ ಸುಬ್ರಹ್ಮಣ್ಯ ಎಂಬುವರನ್ನೂ ಅಡ್ಡಕಟ್ಟಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ಕೃಷ್ಣಮೂರ್ತಿ ಅವರು ಹೆಲ್ಮೆಟ್ ಹಾಕಿಕೊಂಡ ಪರಿಣಾಮ ಅದು ಅವರ ಭುಜಕ್ಕೆ ಬಡೆದಿದೆ. ಸುಬ್ರಹ್ಮಣ್ಯರವರ ಬೈಕಿನ ಮೇಲೆ ಹೊಡೆತ ಬಿದ್ದಿದೆ.
ಇನ್ನು ಬೈಕಿನಲ್ಲಿ ಬರುತ್ತಿದ್ದ ಇಬ್ಬರ ಮೇಲು ದಾಳಿ ನಡೆಸಿದ್ದಾನೆ.
ಈ ಕಾರಣಕ್ಕೆ ಪೊಲೀಸರು ಸಂದೀಪ್ ನನ್ನು ಬಂಧಿಸಿದ್ದು ಆತ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್