ಶಿವಮೊಗ್ಗ: ದರಕಾಸ್ತಿನಿಂದ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ವಶಕ್ಕೊಪ್ಪಿಸಲು ಬಿಡದ ಅರಣ್ಯಾಧಿಕಾರಿಗಳ ಅಧಿಕಾರಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಲ್ಲದೇ ನಾಲ್ವರ ಮೇಲೆ ಏಳೆಂಟು ಸುಳ್ಳು ಮೊಕದ್ದಮೆ ದಾಖಲಿಸಿರುವ ಬಗ್ಗೆ ತಾಲೂಕಿನ ದೇವಕಾತಿಕೊಪ್ಪ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇಂದು ಮದ್ಯಾಹ್ನದಿಂದ ಪ್ರತಿಭಟನೆಗಿಳಿದಿದ್ದಾರೆ.
ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ115ರಿಂದ 126ರ ವರೆಗಿನ ಭೂಮಿಯಲ್ಲಿ 12ದಲಿತರಿಗೆ 1979ರಲ್ಲಿ ಅಂದಿನ ಸರ್ಕಾರ ತಲಾ 2ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಹಣಿ ಹಾಗೂ ಖಾತೆ ಮಾಡಿ ಕೊಟ್ಟಿತ್ತು.
ಕಳೆದ ಎರಡು ದಿನದ ಹಿಂದೆ ಈ ಭೂಮಿಯಲ್ಲಿದ್ದ ಗಿಡಗಂಟೆಗಳನ್ನು ಕಡಿದು ಸ್ವಚ್ಛಗೊಳಿಸಿ ಸಾಗುವಳಿಗೆ ಮುಂದಾಗಿದ್ದ ರೈತರ ಕ್ರಮದ ವಿರುದ್ಧ ಶಂಕರ ವಲಯ ಅರಣ್ಯ ವಿಭಾಗದ ಕುಮಾರ್, ಗಿರೀಶ್ ಹಾಗೂ ಇತರ ನಾಲ್ವರು ರೈತರ ದಾಖಲೆಗಳನ್ನು ಪರಿಶೀಲಿಸದೇ ಹಿಗ್ಗಾಮುಗ್ಗಾ ತಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಮಕ್ಕಳು, ಮಹಿಳೆಯರನ್ನು ನೋಡದೇ ಹಲ್ಲೆ ನಡೆಸಿದ್ದಾರೆಂದು ಹೇಳಲಾಗಿದ್ದು, ಆಗ ಸಿಕ್ಕ ಬಸವರಾಜಪ್ಪ, ನಾಗಣ್ಣ, ಪ್ರದೀಪ ಹಾಗೂ ಬಸಣ್ಣಿ ಎಂಬುವವರನ್ನು ಬಂಧಿಸಿ ಶ್ರೀಗಂಧ ಕಳುವಿನ ಆರೋಪದ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಬಸಣ್ಣಿ ಅವರ ಕೈ ಮುರಿದಿದ್ದು ಆಸ್ಪತ್ರೆಯಲ್ಲಿ ದಾಖಲಾಗಲೂ ಸಹ ಅವಕಾಶ ನೀಡಿಲ್ಲ ಎಂದು ರೈತರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆಯ ಈ ಅಧಿಕಾರಿಗಳು ಸ್ಥಳಕ್ಕೆ ಬಂದು ಕ್ಷಮೆ ಕೇಳಬೇಕು ಹಾಗೂ ಹಾಕಿರುವ ದೂರುಗಳನ್ನು ವಾಪಸ್ ಪಡೆಯಲು ಒತ್ತಾಯಿಸಿದ್ದಾರಸ. ರೈತರ ಮೇಲೆ ಸುಳ್ಳು ದೂರು ದಾಖಲಾಗಿರುವುದನ್ನು ಶಾಸಕ ಅಶೋಕ್ ನಾಯ್ಕ್ ಖಂಡಿಸಿದ್ದು, ಕೂಡಲೇ ಅದನ್ನು ವಾಪಸ್ ಪಡೆಯಲು ಸೂಚಿಸಿದ್ದಾರೆನ್ನಲಾಗಿದೆ.
ಪ್ರತಿಭಟನೆ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಡಿ.ಬಿ.ವಿಜಯ ಕುಮಾರ್, ಸದಸ್ಯ ಮಾಲತೇಶ್, ಪ್ರಮುಖರಾದ ಡಿ.ಟಿ.ಪ್ರಕಾಶ್, ಡಿ.ಸಿ.ರವಿಕುಮಾರ್, ಶಿವಮೂರ್ತಿ, ವಿರೇಶ್, ಗೌರಮ್ಮ, ರೇಖಾ, ಬಸಮ್ಮ, ಸುಜಾತ ಹಾಗೂ ಇತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್