ರಿಪ್ಪನ್ಪೇಟೆ : ಪುನೀತ್ ರಾಜ್ಕುಮಾರ್ ಅಗಲಿಕೆಯಿಂದ ಇಡೀ ರಾಜ್ಯ ಶೋಕ ಸಾಗರದಲ್ಲಿ ಮುಳುಗಿದೆ. ಈ ನಡುವೆ ರಿಪ್ಪನ್ಪೇಟೆ ನಗರ ಸಂಪೂರ್ಣ ಬಂದ್ ಆಗಿದೆ. ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಬಂದ್ ಮಾಡಿದ್ದು, ಪಟ್ಟಣ ಖಾಲಿ ಖಾಲಿಯಾಗಿದೆ.
ಪಟ್ಟಣದ ಸರ್ಕಲ್ನಲ್ಲಿ ಪುನೀತ್ ರಾಜ್ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಲಾಗಿದೆ. ಪಟ್ಟಣದ ಮೆಡಿಕಲ್ ಶಾಪ್ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಬಂದ್ ಮಾಡಲಾಗಿದ್ದು, ಕೇವಲ ಬೆರಳೆಣಿಕೆಯ ಬಸ್ ಸಂಚಾರ ಮಾಡುತ್ತಿವೆ.
ಕನ್ನಡ ಚಲನಚಿತ್ರರಂಗದ ಮೇರುನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಪ್ರಯುಕ್ತ ಪೇಟೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಶನಿವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಬೃಹತ್ ಆಕಾರದ ಕಟೌಟ್ ಗೆ ಮಾಲಾರ್ಪಣೆ ಮಾಡಿ ನಂತರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನೆರವೇರಿತು. ಪುನಿತ್ ರಾಜಕುಮಾರ್ ನಿಧನದ ಸಲುವಾಗಿ ರಿಪ್ಪನ್ ಪೇಟೆಯಲ್ಲಿ ಬೆಳಿಗ್ಗೆ 6 ಗಂಟೆಯಿಂದ 12:00 ಗಂಟೆ ತನಕ ಪೂರ್ಣವಾಗಿ ಸ್ವಯಂ ಪ್ರೇರಿತರಾಗಿ ಬಂದ್ ಮಾಡಲಾಯಿತು.ಈ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಸ್ಮರಣಾರ್ಥವಾಗಿ ಪಟ್ಟಣದ ಯಾವುದಾದರೂ ಒಂದು ವೃತ್ತ ಹಾಗೂ ರಸ್ತೆಗೆ ಪುನೀತ್ ಹೆಸರಿಡುವ ಕುರಿತು ನಿರ್ಧರಿಸಲಾಯಿತು.
ಜೊತೆಗೆ ಪುನೀತ್ ರಾಜ್ ಅಭಿಮಾನಿ ಬಳಗ ದಿಂದ ಶೆಟ್ಟಿಬೀಡು, ಹೊಂಬುಜ ,ಗರ್ತಿಕೆರೆ, ಹಿರೇಜೇನಿ,ಕೋಡೂರು,ಸೂಡೂರು ಸೇರಿದಂತೆ ಹಲವಾರು ಭಾಗಗಳಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಈ ಶ್ರದ್ಧಾಂಜಲಿ ಸಮಾರಂಭದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷೆ ಪದ್ಮ ಸುರೇಶ್,ಗೌರವ ಅಧ್ಯಕ್ಷ ಹಿರಿಯಣ್ಣ ಭಂಡಾರಿ, ತ.ಮ ನರಸಿಂಹ,ಸುರೇಶ್ ಸಿಂಗ್,ಎನ್ ಸತೀಶ್,ಎಂ.ಬಿ ಮಂಜುನಾಥ್,ಆರ್.ಡಿ ಶೀಲಾ, ಲಕ್ಷ್ಮಿ ಶ್ರೀನಿವಾಸ್, ನಾಗರತ್ನ ದೇವರಾಜ್, ಸುಧೀಂದ್ರ ಪೂಜಾರಿ,ಪಿಯುಸ್ ರೋಡ್ರಿಗಸ್,ಆರ್. ಎನ್ ಮಂಜುನಾಥ್,ಮಂಜ ನಾಯಕ್,ಶ್ರೀಧರ್ ಉಪಸ್ಥಿತರಿದ್ದರು.
ವರದಿ:ದೇವರಾಜ್ ಆರಗ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್