WhatsApp Channel
Join Now
Telegram Channel
Join Now
ಭದ್ರಾವತಿ : ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನಲೆಯಲ್ಲಿ ಭದ್ರಾವತಿಯ ಪಟ್ಟಣದ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡುವುದರ ಮೂಲಕ ವರ್ತಕರು ಗೌರವ ಸಲ್ಲಿಸಿದ್ದಾರೆ.
ಇನ್ನು ಚಾಮೇಗೌಡ ಲೈನ್ ನ ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಬಂದ್ ಮಾಡುವಂತೆ ಆಟೋಗಳಲ್ಲಿ ಪ್ರಚಾರ ಮಾಡಲಾಗುತ್ತಿದ್ದು ಬಂದ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ.
ಹುಚ್ಚು ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಪ್ರಕ್ಷುಬ್ಧ ವಾತವರಣ ನಿರ್ಮಿಸುತ್ತಿದ್ದು ಪೊಲೀಸರು ಹುಚ್ಚು ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಯಾವುದೇ ರೀತಿಯಲ್ಲಿ ತೊಂದರೆ ಹಾಗೂ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ವಹಿಸಿದ್ದಾರೆ