ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು, ಈ ಪೈಕಿ ಗೀತಾ 20, ಮಂಜುಳ 12 ಮತ್ತು ಶಶಿಕಲಾ 4 ಮತಗಳನ್ನು ಪಡೆದುಕೊಂಡರು.
ಪರಿಶಿಷ್ಟ ಜಾತಿಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ವಾರ್ಡ್ ನಂ.9ರ ಚನ್ನಪ್ಪ ಮತ್ತು ಜೆಡಿಎಸ್ ಪಕ್ಷದಿಂದ ವಾರ್ಡ್ ನಂ. 25 ರ ಕೆ. ಉದಯ ಕುಮಾರ್ ಸ್ಪರ್ಧಿಸಿದ್ದು, ಈ ಪೈಕಿ ಚನ್ನಪ್ಪ 20 ಮತಗಳನ್ನು ಹಾಗು ಕೆ. ಉದಯ ಕುಮಾರ್ 12 ಮತಗಳನ್ನು ಪಡೆದುಕೊಂಡರು. ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 4 ಸದಸ್ಯರು ತಟಸ್ಥವಾಗಿ ಉಳಿದುಕೊಂಡರು.
ಒಟ್ಟು 34 ಸದಸ್ಯರಿದ್ದು, ಈ ಪೈಕಿ ಶಾಸಕ ಬಿ.ಕೆ ಸಂಗಮೇಶ್ವರ್ 1 ಮತ ಹೊಂದಿದ್ದಾರೆ. ಒಟ್ಟು 36 ಮತಗಳು ಚಲಾವಣೆಗೊಂಡಿವೆ. ನಗರಸಭೆಯಲ್ಲಿ ಕಾಂಗ್ರೆಸ್ 18, ಜೆಡಿಎಸ್ 12, ಬಿಜೆಪಿ 4 ಮತ್ತು 1 ಪಕ್ಷೇತರ ಸದಸ್ಯರಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್ ಉಪಸ್ಥಿತರಿದ್ದರು. ಚುನಾವಣಾಧಿ ಕಾರಿಯಾಗಿ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಕರ್ತವ್ಯ ನಿರ್ವಹಿಸಿದರು. ಪೌರಾಯುಕ್ತ ಕೆ. ಪರಮೇಶ್ ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್