ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಸದಸ್ಯರು ಕಾರಣ ಏನಂತೀರಾ ಒಮ್ಮೆ ಈ ಸ್ಟೋರಿ ನೋಡಿ.!!

ಆನಂದಪುರ : ಸರ್ಕಾರ ಇದೀಗ ಕಾನೂನಿನ ಅರಿವನ್ನು ತಿಳಿಸಲು ಗ್ರಾಮ ಪಂಚಾಯತ್ ಮಟ್ಟದಿಂದ ಕಾನೂನು ಅರಿವು ಕಾರ್ಯಕ್ರಮವನ್ನು  ನಡೆಸುತ್ತಿದೆ.ಮಹಿಳೆಯರಿಗೆ ,ಮಕ್ಕಳಿಗೆ ,ದುರ್ಬಲ ವರ್ಗದವರಿಗೆ ಕಾನೂನಿನ ಸಂಪೂರ್ಣ ಅರಿವಿರಬೇಕು ಎಂಬ ಉದ್ದೇಶದಿಂದ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಒಳಗೊಂಡು ವಕೀಲರ ತಂಡದೊಂದಿಗೆ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುತ್ತಿದೆ.
ಆದರೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ದಿಂದ ಕೆಲ ಸದಸ್ಯರು ಅಸಮಾಧಾನವನ್ನು ಹೊರಹಾಕಿ ಸಭೆ ಬಹಿಷ್ಕರಿಸಿ ಹೊರನಡೆದಿದ್ದಾರೆ.
ಯಡೇಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಕುಮಾರ್ ಅವರು ಸಭೆಯ ಪೂರ್ವ ಸಿದ್ಧತೆಗಳು ಹಾಗೂ ಸಭೆಯ ಬಗ್ಗೆ ಸಾರ್ವಜನಿಕರಿಗಾಗಲಿ ಅಥವಾ ಪಂಚಾಯತ್ ಸದಸ್ಯರಿಗೆ ಯಾವುದೇ ಮಾಹಿತಿಯನ್ನು ನೀಡದೆ ತತಕ್ಷಣ ಸಭೆಯನ್ನು ಕರೆದಿದ್ದು ಕೇವಲ ಆಶಾ ಕಾರ್ಯಕರ್ತರು ಹಾಗೂ ಕೆಲ ಅಧಿಕಾರಿಗಳು ಹಾಜರಿದ್ದು ಸರ್ಕಾರದ ಈ ಯೋಜನೆ ಜನಸಾಮಾನ್ಯರಿಗೆ ತಿಳಿಸುವಂತಹ ಕಾರ್ಯಕ್ರಮ ಇಲ್ಲಿ ಸಾರ್ವಜನಿಕರಿಗೆ ಯಾವುದೇ ಪೂರ್ವ ಮಾಹಿತಿಯನ್ನು ನೀಡದೆ ಹಾಗೂ ಪಂಚಾಯಿತಿ ಸದಸ್ಯರಿಗೂ ಯಾವುದೇ ಮಾಹಿತಿಯನ್ನು ನೀಡದೆ ಪಿಡಿಒರವರು ದುರ್ವರ್ತನೆ ತೋರುತ್ತಿದ್ದಾರೆ ಎಂದು ಗ್ರಾಮ ಪಂಚಾಯತ್ ಸದಸ್ಯ ನಟರಾಜ್ ಆಕ್ರೋಶ ವ್ಯಕ್ತಪಡಿಸಿದರು.
ಪಿಡಿಒ ಕುಮಾರ್ ರವರು ಕಳೆದ ಕೆಲವು ಸಮಯದಿಂದ ಹೀಗೆ ತತಕ್ಷಣ ನಿರ್ಧಾರವನ್ನು ಕೈಗೊಳ್ಳುತ್ತಿದ್ದು ಪಂಚಾಯತಿ ಸದಸ್ಯರಿಗೆ ಬೆಲೆ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ ಹಾಗಾಗಿ ಈ ಈ ಸಭೆಯನ್ನು ನಾವು ಬಹಿಷ್ಕರಿಸಿ ಹೊರನಡೆಯುತ್ತಿದ್ದೇವೆ ಹಿರಿಯ ಅಧಿಕಾರಿಗಳು ಪಿಡಿಒ ರವರ ನಡೆಯ ಬಗ್ಗೆ ಗಮನಹರಿಸಬೇಕು ಎನ್ನುತ್ತಿದ್ದಂತೆ ಇತರ ಕೆಲ ಸದಸ್ಯರು ಸಹ ಸಭೆಯಿಂದ ಹೊರನಡೆದು ಸಭೆಯನ್ನು ಬಹಿಷ್ಕರಿಸಿ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಪವನ್ ಕುಮಾರ್ ಕಠಾರೆ..

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

50 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago