ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ವಹಿಸಿದ್ದರು..
ಅಭೂತಪೂರ್ವ ಸಾಹಿತ್ಯ ಸಮ್ಮೇಳನದಲ್ಲಿ ಈಗಾಗಲೆ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಹಾಗೂ ಗುರುಕುಲ ಶಿರೋಮಣಿ ಎಂಬ ಎರಡು ಪ್ರಶಸ್ತಿಯನ್ನು ಪಡೆದಂತಹ ಅತ್ಯುತ್ತಮ ಬರಹಗಾರ ರಿಪ್ಪನ್ ಪೇಟೆಯ ರಫ಼ಿ ರಿಪ್ಪನ್ ಪೇಟೆ ರವರಿಗೆ ಗುರುಕುಲ ಕಲಾ ಪ್ರತಿಷ್ಠಾನದಿಂದ ಇವರ ಅನುಪಮ ಸೇವೆಯನ್ನು ಗುರುತಿಸಿ “ಗುರುಕುಲಾ ಕಲಾ ಕೀರ್ತಿ” ಎಂಬ ಬಿರುದಿನೊಂದಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಸಾಹಿತ್ಯ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸುವ ಯುವಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್ ನಾಗಾಭರಣ, ಹಿರಿಯ ಸಾಹಿತಿ ಪದ್ಮಶ್ರೀ ಪುರಸ್ಕೃತ ದೊಡ್ಡರಂಗೇಗೌಡ ಹಾಗೂ ಜನಪದ ಗಾಯಕರಾದ ಗುರುರಾಜ್ ಹೊಸಕೋಟೆ ಗುರುಕುಲ ಕಲಾ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಹುಲಿಯೂರು ದುರ್ಗಾ ಲಕ್ಷ್ಮಿನಾರಾಯಣ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಈ ಅತ್ಯುನ್ನತ ಪ್ರಶಸ್ತಿಯನ್ನು ಪಡೆದಂತಹ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ ನಿಗೆ ಜಿಲ್ಲೆಯಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ….
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್