Categories: Blog

ರಿಪ್ಪನ್ ಪೇಟೆ : ಗುಂಡಿ ಬಿದ್ದ ರಸ್ತೆಯಲ್ಲೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಕಲ್ಮಕ್ಕಿ ಗ್ರಾಮಸ್ಥರು : ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದಿವೆ ಮೂಲಭೂತ ಸೌಕರ್ಯಕ್ಕೆ ಜನ ಪರದಾಡುವ ಸ್ಥಿತಿ ಇರುವದು  ನಮ್ಮ ದೇಶದಲ್ಲಿ ಹೊಸದೇನಲ್ಲ  ಇದೇ ರೀತಿ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದ ಜನರು ಇದೀಗ ಮೂಲಭೂತ ಸೌಕರ್ಯವಾದ ರಸ್ತೆ ಹಾಗು ಕುಡಿಯುವ ನೀರಿನ ಸೌಕರ್ಯವಿಲ್ಲದೇ ದಿನಾಲು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಹೆಚ್ ಹರತಾಳು ಹಾಲಪ್ಪನವರ ಸ್ವಕ್ಷೇತ್ರವಾದ ಹರತಾಳು ನಿಂದ ಕೂಗಳತೆ ದೂರದ ಬಾಳೂರು ಗ್ರಾಪಂ ವ್ಯಾಪ್ತಿಯ ಕಲ್ಮಕ್ಕಿ ಗ್ರಾಮದಲ್ಲಿ ಜನ ರಸ್ತೆ ವ್ಯವಸ್ಥೆ ಸರಿ ಇಲ್ಲದೆ ಇಂದು ಬಾಳೂರು ಗ್ರಾಪಂ ಪಿಡಿಓ ಹಾಗೂ ಪಂಚಾಯತಿಯ ಸದಸ್ಯರೆಲ್ಲಾರಿಗು ಧಿಕ್ಕಾರ ಕೂಗಿ ನಡು ರಸ್ತೆಯಲ್ಲೇ ಬಾಳೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.



ವಿದ್ಯಾರ್ಥಿಗಳು,ರೈತರು,ವಯೋವೃದ್ಧರು ಶಾಲಾ~ಕಾಲೇಜು ಮತ್ತು ಇನ್ನಿತರ ಯಾವುದೇ ದೈನಂದಿನ ಚಟುವಟಿಕೆಗಳಿಗೆ ಹೋಗಬೇಕಾದಾಗ ಈ ರಸ್ತೆಯಲ್ಲಿ ಬಿದ್ದು ಗಾಯ ಮಾಡಿಕೊಂಡಿರುವ ಘಟನೆ ಅದೆಷ್ಟೋ ನಡೆದಿದೆ ಹಾಗು ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಬರುವ ಆಂಬುಲೆನ್ಸ್ ಹಾಗುಉ ಇನ್ನಿತರ ವಾಹನಗಳು ಊರಿನಿಂದ ಹೊರಗೆ ನಿಲ್ಲಿಸಿ ರೋಗಿಗಳನ್ನು ಹೊತ್ತುಕೊಂಡು ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರಾದ ಮಂಜೋಜಿ ರಾವ್ ಆಕ್ರೋಶ ವ್ಯಕ್ತಪಡಿಸಿದರು.

  ಪ್ರತಿ ಬಾರಿ ಚುನಾವಣಾ ಸಂಧರ್ಭದಲ್ಲಿ ಬರುವ ಜನಪ್ರತಿನಿಧಿಗಳು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಆಶ್ವಾಸನೆ ನೀಡುತ್ತಾರೆಯೇ ಹೊರತು ಗೆದ್ದ ನಂತರ ಯಾವೊಬ್ಬ ಜನಪ್ರತಿನಿಧಿಯು ನಮ್ಮಗ್ರಾಮದ ಕಡೆ ತಲೆ ಹಾಕುವುದಿಲ್ಲ.ಕೆಸರುಗದ್ದೆಯಾಗಿರುವ ಈ ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿರುವಾಗ ಕುಡಿಯುವ ನೀರಿಗಾಗಿ ಇದೇ ರಸ್ತೆಯಲ್ಲಿ ಎದ್ದು ಬಿದ್ದು ನೀರು ತರುವಂತಹ ಶೋಚನೀಯ ಪರಿಸ್ಥಿತಿ ನಮ್ಮ ಈ ಕುಗ್ರಾಮಕ್ಕೆ ಬಂದೊದಗಿದೆ.
ಮುಂದಿನ ದಿನಗಳಲ್ಲಿ ರಸ್ತೆಯನ್ನು ಸರಿಪಡಿಸದೇ ಇದ್ದಲ್ಲಿ ಮುಂಬರುವ ಚುನಾವಣಾ ಬಹಿಷ್ಕಾರ ಮಾಡಿ ಉಗ್ರವಾದ ಹೋರಾಟಕ್ಕೆ ಗ್ರಾಮಸ್ಥರು ಮುಂದಾಗುತ್ತೇವೆ  ಎಂದು ಕಲ್ಮಕ್ಕಿ,ಕೊರಲುಹಳ್ಳಿ ಗ್ರಾಮಸ್ಥೆ ವಿದ್ಯಾ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.


ಈ ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಶಿವಾಜಿರಾವ್ ,ಭವಾನಿ,ಶೇಖರಪ್ಪ,ತಿಮ್ಮಪ್ಪ, ಯಶೋಧ, ರವಿ,ರೋಹಿತ್,ಶೇಖರಪ್ಪಗೌಡ,ಸ್ವಾತಿ,ಶೋಭಾ,ರಾಮು,ಶರತ್,ನಾಗರಾಜ್ ಹಾಗು ಇನ್ನಿತರರು ಪಾಲ್ಗೊಂಡಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…

3 hours ago

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

3 hours ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

4 hours ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

11 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

15 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

15 hours ago