ರಿಪ್ಪನ್ ಪೇಟೆ : ಸಮಾಜವಾದಿ ಚಿಂತನೆಯಲ್ಲಿ ಸಮಾಜದ ಸರ್ವ ಜನಾಂಗಕ್ಕೂ ಸಹಬಾಳ್ವೆ, ಸಾಮರಸ್ಯವನ್ನು ಸಾರಿ ಕರ್ನಾಟಕವನ್ನು ಉತ್ತುಂಗಕ್ಕೆ ಏರಿಸಿದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅನನ್ಯ ಹಾಗು ಅಪಾರ ಎಂದು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು.
ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ 91 ನೇ ಜನ್ಮ ದಿನಾಚರಣೆ ಪ್ರಯುಕ್ತ ಅವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಆರ್ ಎನ್ ಮಂಜುನಾಥ್ ಮಾತನಾಡಿ ಸಮಾಜ ಕಂಡ ಸಮಾಜವಾದಿ ಚಿಂತಕರಲ್ಲಿ ರಾಜ್ಯಕ್ಕೆ ಜೆ ಹೆಚ್ ಪಟೇಲ್ ರವರ ಕೊಡುಗೆ ಅಪೂರ್ವವಾದುದು ಎಂದರು.
ಈ ಸಭೆಗೆ ಸರ್ವ ಪಕ್ಷದ ಮುಖಂಡರುಗಳು ಆಗಮಿಸಿ ಪಕ್ಷಾತೀತವಾಗಿ ಜನ್ಮ ದಿನಾಚರಣೆಯನ್ನು ಆಚರಿಸಿದ್ದು ಅವರ ವ್ಯಕ್ತಿತ್ವ ಏನು ಎಂಬುವುದಕ್ಕೆ ಸಾಕ್ಷಿಯಾಯಿತು.
ಈ ಸಮಾರಂಭದಲ್ಲಿ ಮಾಜಿ ತಾಪಂ ಸದಸ್ಯರಾದ ಎಂ ಬಿ ಲಕ್ಷಣ ಗೌಡ,ರಿಪ್ಪನ್ ಪೇಟೆಯ ಗ್ರಾಪಂ ಸದಸ್ಯರುಗಳಾದ ಆಸೀಫ಼್ ಭಾಷಾಸಾಬ್,ಪ್ರಕಾಶ್ ಪಾಲೇಕರ್,ಮಲ್ಲಿಕಾರ್ಜುನ್ ಬಿಜೆಪಿ ಮುಖಂಡರಾದ ಆರ್ ರಾಘವೇಂದ್ರ ರೈತ ಸಂಘದ ಮುಖಂಡರಾದ ಆರ್ ಎನ್ ಮಂಜಪ್ಪ , ಸುಗಂಧರಾಜ್ ಮತ್ತು ಪ್ರಮುಖರಾದ ಜಿ ಎಸ್ ರಾಘವೇಂದ್ರ,ಆರ್ ಗೋಪಾಲಕೃಷ್ಣ, ಭೀಮರಾಜ್ ಕೆರೆಹಳ್ಳಿ ರವೀಂದ್ರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್