ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಜನಪರವಾಗಿ ಬಳಸಿ, ‘ಲೋಕಾಯುಕ್ತರು ಹೀಗೂ ಕೆಲಸ ಮಾಡಬಹುದು’ ಎಂದು ಸಾಧಿಸಿ ತೋರಿಸಿದ ನ್ಯಾಯಮೂರ್ತಿ ಎನ್.ವೆಂಕಟಾಚಲ (90) ಬುಧವಾರ ಬೆಳಿಗ್ಗೆ 6 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ನ್ಯಾಯಮೂರ್ತಿ ವೆಂಕಟಾಚಲ ಅವರು ಲೋಕಾಯುಕ್ತರಾಗಿ ನೇಮಕಗೊಂಡ ನಂತರವೇ ಸರ್ಕಾರಿ ಅಧಿಕಾರಿಗಳಲ್ಲಿ ಲೋಕಾಯುಕ್ತ ಭಯವನ್ನು ಉಂಟು ಮಾಡಿತು. ಲೋಕಾಯುಕ್ತ ಸಂಸ್ಥೆಯಿಂದ ತಮ್ಮ ನೋವುಗಳಿಗೆ ಪರಿಹಾರ ಸಿಗುತ್ತದೆ ಎಂಬ ಭಾವನೆ ಜನರಲ್ಲಿಯೂ ಬಂತು.
‘ಬಳ್ಳಾರಿ ರಸ್ತೆಯ ಕಾವೇರಿ ಚಿತ್ರಮಂದಿರ ಹಿಂಭಾಗದ ಲಕ್ಷ್ಮಿ ದೇವಾಲಯದ ಬಳಿಯ ತಮ್ಮ ನಿವಾಸದಲ್ಲಿದ್ದ ಅವರಿಗೆ ಬೆಳಿಗ್ಗೆ 5.45ಕ್ಕೆ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಒಬ್ಬ ಪುತ್ರ ಮತ್ತು ಪುತ್ರಿ ಸದ್ಯ ಅಮೆರಿಕದಲ್ಲಿದ್ದು ಅವರು ಬಂದ ನಂತರ ಗುರುವಾರ (ಅ.31) ಅಂತ್ಯಕ್ರಿಯೆ ನಡೆಯಲಿದೆ’ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೆಂಡತಿ ಅನುಶ್ರೀಯಾ, ಪುತ್ರರಾದ ಶೇಷಾಚಲ, ವೇದಾಚಲ (ಇಬ್ಬರೂ ವಕೀಲರು) ಮತ್ತು ಅರ್ಜುನಾಚಲ (ಸಾಫ್ಟ್ವೇರ್ ಡೆವಲಪರ್) ಮತ್ತು ಮಗಳು ಅರುಣಾಚಲ (ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರು) ಇದ್ದಾರೆ. ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೊಮ್ಮಗ ವರುಣ್ ತಿಳಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್