ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.
ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು.
ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್ ಮಿಶ್ರ ಪುತ್ರನ ಆಶಿಶ್ ಮಿಶ್ರ ಬಂದಿತನಾಗಿದ್ದು ಈತನ ತನಿಖೆಯ ನಡೆಸಲು ಅಜಯ್ ಮಿಶ್ರ ಪ್ರಭಾವಬೀರುತ್ತಿದ್ದು ಅವರ ರಾಜೀನಾಮೆಯಲ್ಲಿ ಕೂಡಲೆ ಪಡೆದುಕೊಳ್ಳಬೇಕು. ಈ ವಿಷಯದ ಬಗ್ಗೆ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಯಾವುದೇ ತಲೆಕೆಡಿಸಿಕೊಳ್ಳುತ್ತಿಲ್ಲಾ ಇದರ ಅರ್ಥ ಪರೋಕ್ಷವಾಗಿ ಕೇಂದ್ರ ಸರ್ಕಾರ ಆರೋಪಿಯ ಬೆಂಬಲಕ್ಕೆ ನಿಂತಿದೆಯಾ ಅನ್ನೋ ಪ್ರಶ್ನೆ ಕಾಡುತ್ತೆ ಎಂದು ಕಾಂಗ್ರೆಸ್ ಜಿಲ್ಲಾದ್ಯಕ್ಷ ಹೆಚ್.ಎಸ್ ಸುಂದರೇಶ್ ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ಬಿ ಪ್ರಸನ್ನ ಕುಮಾರ್,ವೈ ಹೆಚ್.ನಾಗರಾಜ್,ಶೇಷಾದ್ರಿ,ಚಂದ್ರ ಭೂಪಾಲ್,ಮೊಹಮ್ಮದ್ ಆರಿಫ್ ಉಲ್ಲ,ಹೆಚ್. ಸಿ.ಯೋಗೀಶ್,ಯಮುನಾ ರಂಗೇಗೌಡ,ಸುವರ್ಣ ,ವಿವಿಧ ಘಟಕಗಳ ಪದಾಧಿಕಾರಿಗಳು,ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷರಾದ ಎನ್ ಡಿ ಪ್ರವೀಣ್ ಕುಮಾರ್ ಮುಂತಾದವರಿದ್ದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್