ಶಿವಮೊಗ್ಗ ಜಿಲ್ಲೆಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಡಗರ: ಭೂ ತಾಯಿಗೆ ಪೂಜೆ ಸಲ್ಲಿಸಿದ ಅನ್ನದಾತರು

ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ನದಾತರು ಭೂಮಿ ಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಜಿಲ್ಲೆಯ ಸಾಗರ, ಹೊಸನಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ ತಾಲೂಕಿನಲ್ಲಿ ಈ ಹಬ್ಬವನ್ನ ವಿಶೇಷವಾಗಿ ಆಚರಣೆ ಮಾಡಲಾಗುತ್ತೆ.

ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ. ವಿವಿಧ ಜಾತಿಯ ಸೊಪ್ಪನ್ನು ಬೆಟ್ಟದಿಂದ ಕೊಯ್ದು ತರುವ ಅನ್ನದಾತರು ಅದನ್ನು ಬೇಯಿಸುತ್ತಾರೆ. ಇದರ ಮಿಶ್ರಣಕ್ಕೆ ‘ಚರಗ’ ಎನ್ನುತ್ತಾರೆ. ಈ ಮಿಶ್ರಣವನ್ನು ಗದ್ದೆಗೆ ಬಿತ್ತಿ ಒಳ್ಳೆಯ ಫಸಲು ಬರಲಿ ಎಂದು ಪ್ರಾರ್ಥಿಸುತ್ತಾರೆ. ಈ ವಿಧಾನಗಳೆಲ್ಲ ಮುಗಿದ ಮೇಲೆ ಹೊಲದಲ್ಲೆ ಕುಳಿತು ಎಲ್ಲರೂ ಊಟ ಮಾಡುತ್ತಾರೆ.

ಭೂ ತಾಯಿ ಈ ಸಮಯದಲ್ಲಿ ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುತ್ತಾಳೆ. ಹೀಗಾಗಿ, ರೈತರು ಭೂ ತಾಯಿಯನ್ನು ಗರ್ಭಿಣಿ ಸ್ಥಾನದಲ್ಲಿಟ್ಟು, ಆಕೆಗೆ ಸೀಮಂತದ ಸಂಭ್ರಮದಂತೆ ಪೂಜೆ ಸಲ್ಲಿಸುತ್ತಾರೆ. ಭೂಮಿ ಹುಣ್ಣಿಮೆ ಮಲೆನಾಡಿನ ರೈತರ ಪಾಲಿಗೆ ಸಂಭ್ರಮದ ಹಬ್ಬ.

:::ಹೊಸನಗರ ತಾಲೂಕಿನಲ್ಲಿ ಸಡಗರದ ಭೂಮಿಹುಣ್ಣಿಮೆ:::
ಹೊಸನಗರ ತಾಲೂಕಿನ ಸುತ್ತಲಿನ ಹಲವು ಗ್ರಾಮಗಳಲ್ಲಿರೈತ ಸಮೂಹ ಸೀಗೆ ಹುಣ್ಣಿಮೆಯನ್ನು ಶ್ರದ್ಧಾ-ಭಕ್ತಿಗಳೊಂದಿಗೆ ಸಂಭ್ರಮದಿಂದ ಆಚರಿಸಿದರು. ರೈತರು ಖುಷಿ ಖುಷಿಯಿಂದಲೇ ಭೂದೇವಿಯ ಆರಾಧನೆಯಲ್ಲಿನಿರತವಾಗಿದ್ದು ವಿಶೇಷವಾಗಿ ಗಮನ ಸೆಳೆಯಿತು.
ವಿಜಯದಶಮಿಯ ಬಳಿಕ ಬರುವ ಸೀಗೆ ಹುಣ್ಣಿಮೆಗೆ ಗ್ರಾಮೀಣ ಭಾಗದಲ್ಲಿವಿಶೇಷ ಮಹತ್ವ ನೀಡಲಾಗುತ್ತದೆ. ಬೆಳಗ್ಗೆ ಮನೆಯಲ್ಲಿ5 ಬಗೆಯ ಕಾಳು ಕುದಿಸಿ ಅವುಗಳನ್ನು ಹೊಲದ ಸುತ್ತಲೂ ಚರಗದ ರೂಪದಲ್ಲಿಚೆಲ್ಲುವ ಸಂಪ್ರದಾಯವಿದೆ. ಹೀಗೆ ಚರಗ ಚೆಲ್ಲುವುದರಿಂದ ಫಸಲು ಸಮೃದ್ಧವಾಗಿರಲಿದೆ ಎನ್ನುವ ನಂಬಿಕೆ ಜನಪದದಲ್ಲಿದೆ.

ಕುಟುಂಬ ಸದಸ್ಯರ ಜೊತೆಗೆ ತಮ್ಮ ಕೃಷಿ ಭೂಮಿಗೆ ತೆರಳಿದ ರೈತರು ಬೆಳೆದು ನಿಂತಿರುವ ಫಸಲಿಗೆ ಪೂಜೆ ಸಲ್ಲಿಸಿ, ಧನ್ಯತಾ ಭಾವದಲ್ಲಿತೇಲಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

53 minutes ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago