ಶಿವಮೊಗ್ಗ : ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ 12ರ ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ್ದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ
ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಥವಾ ಯಾವ ಕಾರಣಕ್ಕಾಗಿ ಈ ಕೊಲೆಯನ್ನು ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ. ಜೈನುದ್ದೀನ್ ಕೂಡ ರೌಡಿಶೀಟರ್ ಆಗಿದ್ದು ಅವನ ವಿರುದ್ಧ.ಹಲವಾರು ಪ್ರಕರಣಗಳು ದಾಖಲಾಗಿದೆ. 

ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *