ಶಿವಮೊಗ್ಗ : ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ :

ಶಿವಮೊಗ್ಗ : ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆಗೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ.

ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಉದ್ಯಮಿಗೆ ಬೆದರಿಕೆ ಪ್ರಕರಣ ಸಂಬಂಧ  ವಿಚಾರಣೆ ನಡೆಯಲಿದೆ.

ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ನಾಗೇಂದ್ರನನ್ನು ಬಿಗಿ ಭದ್ರತೆಯಲ್ಲಿ ಶಿವಮೊಗ್ಗಕ್ಕೆ ಕರೆತರಲಾಯಿತು. ನ್ಯಾಯಾಲಯದ ಆವರಣದಲ್ಲಿಯು ಭದ್ರತೆ ನಿಯೋಜಿಸಲಾಗಿತ್ತು.

ಪ್ರಕರಣದ ಹಿನ್ನಲೆ :

ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಿನಲ್ಲಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

 ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬ ಮಹಿಳೆಯನ್ನು ಶಿವಮೊಗ್ಗ ಸೈಬರ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಹಿಳೆಯ ಪತಿ ಸದ್ದಾಂ ಹುಸೇನ್ ಬೆಂಗಳೂರಿನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಈತ ಜೈಲಿನಿಂದಲೇ ಶಿವಮೊಗ್ಗದ ಉದ್ಯಮಿಗೆ ವಾಟ್ಸಪ್ ಕಾಲ್ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ.ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದ್ದಾನೆ.

 ಮಲೆನಾಡಿನಲ್ಲಿ ಹೆಬ್ಬೆಟ್ ಮಂಜನ ಹೆಸರು ಚಾಲ್ತಿಯಲ್ಲಿದೆ. ಆತನ ಸಹಚರರು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಹೆಬ್ಬೆಟ್ ಮಂಜನ ಗ್ಯಾಂಗ್ ಮಲೆನಾಡಿನಲ್ಲಿ ಅಕ್ರಮ ಮರಳು ದಂಧೆ ಸೇರಿದಂತೆ ಇತರೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಈ ಎಲ್ಲ ಚಟುವಟಿಕೆಗಳು ಹೆಬ್ಬೆಟ್ ಮಂಜನ ಹೆಸರಿನಲ್ಲಿ ನಡೆಯುತ್ತಿವೆ.

ಬೆದರಿಕೆ ಕರೆ ಬಂದಿದ್ದಾಗ ಉದ್ಯಮಿ ಒಮ್ಮೆ 50 ಸಾವಿರ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದೇ ತಡ ಶಿವಮೊಗ್ಗ ಸೈಬರ್ ಠಾಣೆಯ ಸಿಪಿಐ ಗುರುರಾಜ್ ತಮ್ಮ ತಂಡದ ಜೊತೆ ಭಟ್ಕಳಗೆ ಹೋಗಿ ಆಪರೇಶನ್​ಗೆ ಮುಂದಾಗಿದ್ದರು. ಮಹಿಳೆ ಖಾತೆಯ ಜಾಡು ಹಿಡಿದು ತನಿಖೆ ಕೈಗೊಂಡಾಗ ಭಟ್ಕಳದ ಸಾಹಿರಾ ಬಾನು ಅವರದ್ದು ಎಂಬುದು ಗೊತ್ತಾಗಿದೆ.

ಪರಪ್ಪನ ಅಗ್ರಹಾರದಲ್ಲಿರುವ ಸದ್ದಾಂ ಹುಸೇನ್ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಸ್ಪೋಟಕ್ಕೆ ಬೇಕಾಗಿರುವ ಜೆಲೆಟಿನ್ ಕಡ್ಡಿಯನ್ನು ಈತನೇ ಪೂರೈಕೆ ಮಾಡಿದ್ದನು. ಭಟ್ಕಳದಲ್ಲಿ ಸದ್ದಾಂ ಮೇಲೆ ವಿವಿಧ ಕೇಸ್ ಗಳು ಕೂಡಾ ದಾಖಲು ಆಗಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

50 minutes ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago