Categories: Blog

ಸಮಾಜದಲ್ಲಿ ಪರಿವರ್ತನೆಯನ್ನು ತಂದ ಕೀರ್ತಿ ಹಾನಗಲ್ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ : ಬಿ ಎಸ್ ಯಡಿಯೂರಪ್ಪ

ಶಿಕಾರಿಪುರ  : ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ತೊಡೆದು ಪರಿವರ್ತನೆ ತಂದವರು ಹಾನಗಲ್ಲ ಶಿವಕುಮಾರ ಶ್ರೀಗಳು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಶಿಕಾರಿಪುರ ತಾಲೂಕು ಘಟಕದ ವತಿಯಿಂದ ಹಾನಗಲ್ ಶಿವಕುಮಾರ ಸ್ವಾಮಿಗಳ 154ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ‌ ಅವರು ಉದ್ಘಾಟಿಸಿ ಮಾತನಾಡಿದರು. ಅಂಧ ಶ್ರದ್ಧೆಯಿಂದ ಬಡವನಾಗಿದ್ದ ಸಮಾಜಕ್ಕೆ ಆಚಾರದ ಅರಿವು, ಶರಣ ಸಂಸ್ಕೃತಿ ನೆಲೆಯಲ್ಲಿ ಪುನಶ್ಚೇತನಗೊಳಿಸಿದ್ದಾರೆ ಎಂದು ಹೇಳಿದರು.

ಶೈಕ್ಷಣಿಕವಾಗಿ ಹಿಂದುಳಿದ ಸಮಾಜದಲ್ಲಿ ಗುಲಾಮಗಿರಿ, ಅನಕ್ಷರತೆಯಯನ್ನು ಗಮನಿಸಿ, ಅಕ್ಷರತೆಯ ಮೂಲಕ ಸಮಾಜ ಸಧೃಡವಾಗುತ್ತದೆ ಎಂಬ ನಂಬಿಕೆಯಿಂದ ರಾಜ್ಯಾದ್ಯಂತ ಹಲವು ಮಠಗಳನ್ನು ಸ್ಥಾಪನೆ ಮಾಡಿದ್ದಾರೆ. ಆ ಮೂಲಕ ಶಿಕ್ಷಣ ನೀಡುವ ಕೆಲಸ ಮಾಡಿದರು.

ದೃಷ್ಟಿವಿಕಲಚೇತನರಾಗಿದ್ದ ಪಂಚಾಕ್ಷರಿ ಗವಾಯಿಗಳಿಗೆ ಅವರು ಗುರುಗಳಾಗಿದ್ದು ವಿಶೇಷವಾಗಿದೆ. ಹರಿದು ಹಂಚಿ ಹೋಗಿದ್ದ ವೀರಶೈವ ಸಮಾಜವನ್ನು ಒಗ್ಗೂಡಿಸುವ ಸಲುವಾಗಿ, 1904ರಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ‌ ಸ್ಥಾಪನೆ ಮಾಡಿದರು. ಅಲ್ಲದೇ, ನಾಡಿನ ಹಲವು ಮಠಗಳಿಗೆ ಮಠಾಧೀಶರನ್ನು ನೀಡಿದ ಕೀರ್ತಿ ಸ್ವಾಮೀಜಿಗಳಿಗೆ ಸಲ್ಲುತ್ತದೆ ಎಂದರು.

ಸಮಾಜದಲ್ಲಿ ಮೂಢನಂಬಿಕೆ, ಅಸಮಾನತೆಯನ್ನು ಹೋಗಲಾಡಿಸಿ, ಪರಿವರ್ತನೆಯನ್ನು ತಂದಿದ್ದಾರೆ. ಬದುಕಿನಲ್ಲಿ ಬದಲಾವಣೆ ಬಯಸುವಂತಹ ದುಶ್ಚಟಗಳಿಂದ ದೂರವಾಗಬೇಕು ಅಂತಾ ಗುರುಗಳು ತಿಳಿಸಿದ್ದಾರೆ. ಶ್ರೀಗಳ ಸಂತ ಚಿಂತನೆಗಳನ್ನು ಓದುವ ಮೂಲಕ ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಮಾರ್ಗದಲ್ಲಿ ಸಾಗೋಣ ಎಂದು ಕರೆ ನೀಡಿದರು.

ಇದಕ್ಕೂ ಮೊದಲು ಸಂಸದ ಬಿ.ವೈ ರಾಘವೇಂದ್ರ ಅವರು ಮಾತನಾಡಿದರು. ಹಾನಗಲ್ ಕುಮಾರಸ್ವಾಮಿಗಳು ಏನು ಇಲ್ಲದ ಸಂದರ್ಭದಲ್ಲಿ ಸಮಾಜ ಕಟ್ಟುವ ಕೆಲಸ ಮಾಡಿದ್ದಾರೆ. ವೀರಶೈವ ಸಮಾಜದ ಒಳ ಸಮುದಾಯಗಳನ್ನು ಬಿಟ್ಟು ಎಲ್ಲರೂ ಒಂದಾಗಿ ಹೋಗಬೇಕು. ಎಲ್ಲರೊಳಗೂ ನೆರಳು ಕೊಡುವ ಕೆಲಸ ಮಾಡಬೇಕಾಗಿದೆ. ವೀರಶೈವ ಧರ್ಮದ ಯಾವುದೇ ಜಾತಿಗೆ ಸೀಮಿತವಲ್ಲ. ಹಿಂದೂ ಧರ್ಮದ ಅಡಿಯಲ್ಲಿ ನಾವೆಲ್ಲ ಜೀವನವನ್ನು ನಡೆಸುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಸನ್ಮಾನ ಮಾಡಲಾಯಿತು. ಈ ವೇಳೆ ತೊಗರ್ಸಿ ಮಠದ ಚೆನ್ನವೀರ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ವೀರೇಶಾನಂದ ಸರಸ್ವತಿ ಮಹಾಸ್ವಾಮೀಜಿ, ಶಿಕಾರಿಪುರ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಈರೇಶ ಎನ್ ವಿ ಸಾಧನಾ ಅಕಾಡೆಮಿ ಸ್ಥಾಪಕರು ಮಂಜುನಾಥ್ ಮತ್ತು ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…

17 hours ago

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ

ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…

18 hours ago

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು

ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…

18 hours ago

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ ಲೈಂಗಿಕ ದೌರ್ಜನ್ಯ, ಗರ್ಭಿಣಿ! ಆರೋಪಿಯ ಬಂಧನ

ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…

19 hours ago

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…

23 hours ago

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…

1 day ago