ಸಾಗರ:ಗೋವು ಕಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಾಗರದ ಮಾರಿಕಾಂಬ ದೇವಸ್ಥಾನ ಎದುರು ಇಂದು ಸಾಗರದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಗರದ ಮಾರಿಕಾಂಬ ದೇವಸ್ಥಾನದ ತವರು ಮನೆ ಎದುರು ಗೋವು ಪೂಜೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.
ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ಪ್ರತಿಭಟನೆಯನ್ನು ಮುಂದುವರೆಸುವ ತೀರ್ಮಾನವನ್ನು ವಿಹಿಂಪ ಮತ್ತು ಬಜರಂಗದಳ ತೆಗೆದುಕೊಂಡಿದೆ. ಸಾಗರದ ಬಿ.ಹೆಚ್.ರಸ್ತೆಯ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯನ್ನು ಮಾಡಲಾಗುವುದೆಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಸರಕಾರದ ವಿರುದ್ದ, ಪೋಲೀಸರ ವಿರುದ್ದ ಮತ್ತು ನಗರಸಭೆ ಆಡಳಿತ ವಿರುದ್ದ ಘೋಷಣೆಗಳನ್ನು ವಿಹಿಂಪ ಮತ್ತು ಬಜರಂಗದಳದ ಕಾರ್ಯಕರ್ತರು ಕೂಗಿದರು.
ಪ್ರತಿಭಟನೆಯಲ್ಲಿ ಸಂತೋಷ್ ಶಿವಾಜಿ, ರಾಘು ಕಾಮತ್, ಕೃಷ್ಣಮೂರ್ತಿ, ಅ.ಪು. ನಾರಾಯಣಪ್ಪ, ಶ್ರೀಧರ್ ಸಾಗರ್, ಸುದರ್ಶನ್ ವಕೀಲರು, ಪ್ರತಿಮಾ ಜೋಗಿ, ಶೋಭಾ, ಆಶಾ ನಾಗರಾಜ್, ಕಿರಣ, ನಂದೀಶ, ರವೀಶ್, ಐ.ವಿ. ಹೆಗಡೆ. ವಿರೂಪಾಕ್ಷ ಗೌಡ. ಇನ್ನಿತರ ಪ್ರಮುಖರು ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್