ಸಾಗರ : ನಗರಸಭೆಯಲ್ಲಿ ಒಂದು ವಾರದಿಂದ ನೀರು ಬಿಡಲು ಯಾಂತ್ರಿಕ ತೊಂದರೆ ಎಂಬ ಕಾರಣ ಕೊಟ್ಟಿದ್ದಾರೆ. ಹಿನ್ನೀರಿನಿಂದ ನೀರು ತರುವ ಕೆಲಸವನ್ನ ನನ್ನ ಅವಧಿಯಲ್ಲಿ ಮಾಡಿದ್ದೆ, ಅಲ್ಲಿನಿಂದ ನೀರನ್ನೇಕೆ ಸಾಗರದ ಜನತೆಗೆ ನೀಡಿಲ್ಲ.
ಸಾಗರದಲ್ಲಿ ಬೀದಿ ನಾಯಿಗಳ ಹಾವಳಿ, ಬಿಡಾಡಿ ದನಗಳ ಹಾವಳಿ, ಹಂದಿಗಳ ಹಾವಳಿ ತಡೆಯಲು ನಗರಸಭೆ ಆಡಳಿತ ವಿಫಲವಾಗಿದೆ. ಶಾಸಕ ಹರತಾಳು ಹಾಲಪ್ಪ ಸಾಗರ ನಗರವನ್ನು ‘ಎಣ್ಣೆ’ ಸಾಗರ ಮಾಡಲು ಹೊರಟಿದ್ದಾರೆ ಎಂದರು.
ಕಾರ್ಗಲ್ ಜೋಗ ಭಾಗಕ್ಕೆ ಇರುವ ಒಂದು ಪೋಲೀಸ್ ಠಾಣೆಯನ್ನು ತುಮರಿ ಭಾಗಕ್ಕೆ ನೀಡಿ ಅಲ್ಲಿನ ಜನರ ಸಮಸ್ಯೆಗಳಿಗೆ ಸ್ಪಂದಿಸಿ.ನೋ ನೆಟ್ವರ್ಕ್ ಸಮಸ್ಯೆಗಳನ್ನು ಬಗೆಹರಿಸುವೆ ಎಂದಿದ್ದ ಸಂಸದ ರಾಘವೇಂದ್ರ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿದರು.
::ಬಿಜೆಪಿಯಲ್ಲಿ ಎರಡು ಟೀಂ ಇದೆ::
ಬಿಜೆಪಿ ಯೊಳಗೆ ಯಡಿಯೂರಪ್ಪ ಗುಂಪು ಮತ್ತು ಆರ್.ಎಸ್.ಎಸ್ ಗುಂಪುಗಳಿವೆ.ಯಡಿಯೂರಪ್ಪ ವಿರುದ್ಧ ಆರ್.ಎಸ್.ಎಸ್ ಗುಂಪು ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿಸರು.
ಯಡಿಯೂರಪ್ಪ ಅವರು ರಾಜ್ಯ ಪ್ರವಾಸ ಕೈಗೊಳ್ಳಬಾರದು ಎಂಬ ಕಾರಣಕ್ಕೆ ಉಮೇಶ್ ಮನೆ ಮೇಲೆ ಐಟಿ ದಾಳಿ ಮಾಡಿರುವ ಸಾಧ್ಯತೆಇದೆ ಎಂದು ಹೇಳಿದರು.
ಗೋಷ್ಟಿಯಲ್ಲಿ ತಾರಾಮೂರ್ತಿ, ಮಹಾಬಲ ಕೌತಿ, ಸೋಮಶೇಖರ ಲಾವಿಗೇರಿ, ಸುರೇಶ್’ಬಾಬು, ನಗರಸಭೆ ವಿರೋಧ ಪಕ್ಷದ ನಾಯಕ ಮಂಡಗಳಲೆ ಗಣಪತಿ, ರವಿ ಲಿಂಗನಮಕ್ಕಿ, ಸಂಜು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್