Headlines

ಶಿವಮೊಗ್ಗ ಜಿಲ್ಲೆಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಡಗರ: ಭೂ ತಾಯಿಗೆ ಪೂಜೆ ಸಲ್ಲಿಸಿದ ಅನ್ನದಾತರು

ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ನದಾತರು ಭೂಮಿ ಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಜಿಲ್ಲೆಯ ಸಾಗರ, ಹೊಸನಗರ, ಸೊರಬ, ತೀರ್ಥಹಳ್ಳಿ, ಶಿವಮೊಗ್ಗ ತಾಲೂಕಿನಲ್ಲಿ ಈ ಹಬ್ಬವನ್ನ ವಿಶೇಷವಾಗಿ ಆಚರಣೆ ಮಾಡಲಾಗುತ್ತೆ. ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ. ವಿವಿಧ ಜಾತಿಯ ಸೊಪ್ಪನ್ನು ಬೆಟ್ಟದಿಂದ ಕೊಯ್ದು ತರುವ ಅನ್ನದಾತರು ಅದನ್ನು ಬೇಯಿಸುತ್ತಾರೆ. ಇದರ ಮಿಶ್ರಣಕ್ಕೆ ‘ಚರಗ’ ಎನ್ನುತ್ತಾರೆ. ಈ ಮಿಶ್ರಣವನ್ನು…

Read More

ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ :

ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ವಹಿಸಿದ್ದರು..  ಅಭೂತಪೂರ್ವ ಸಾಹಿತ್ಯ ಸಮ್ಮೇಳನದಲ್ಲಿ ಈಗಾಗಲೆ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಹಾಗೂ ಗುರುಕುಲ ಶಿರೋಮಣಿ…

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಉಲ್ಲಾಸ್ ಆರ್ ಆಯ್ಕೆ :

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಯುವ ಮುಖಂಡ ಉಲ್ಲಾಸ್ ಆರ್ ರವರು ಆಯ್ಕೆಯಾಗಿದ್ದಾರೆ.  ಹೊಸನಗರ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಪಾರಸು ಮಾಡಲಾಗಿತು. ಪಕ್ಷ ಸಂಘಟನೆಯ ಆದಾರದ ಮೇಲೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್…

Read More

ಶಿವಮೊಗ್ಗ ಕೃಷಿ ಕಾಲೇಜಿನ ಪ್ರೊಫೆಸರ್ ಚಿಕ್ಕಬಾಸೂರು ಕೆರೆಯಲ್ಲಿ ಶವವಾಗಿ ಪತ್ತೆ :

ಶಿವಮೊಗ್ಗ : ಇಲ್ಲಿನ ಕೃಷಿ ಕಾಲೇಜಿನ ಜಿ.ಪಿ.ಬಿ. ವಿಭಾಗದ ಮುಖ್ಯಸ್ಥರಾದ ಪ್ರೊ. ಗಂಗಾಪ್ರಸಾದ್ ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಬಸವೇಶ್ವರ ನಗರದ ನಿವಾಸಿಯೂ, ಅಪಾರ ವಿದ್ಯಾರ್ಥಿಗಳ ಆಪ್ತ ಗುರುಗಳೂ ಆಗಿದ್ದ ಗಂಗಾಪ್ರಸಾದ್ (59) ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.ಕೆರೆ ಮಗ್ಗುಲಲ್ಲಿ ಅವರ ಪ್ಯಾಂಟ್, ಚಪ್ಪಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡ( ವಿಜಯಪುರ) ಬಳಿ ಪತ್ತೆಯಾಗಿರುವ ಇವರ ಶವವನ್ನು ಕಾಲೇಜಿನ ವಿದ್ಯಾರ್ಥಿಯೋರ್ವ…

Read More

ಜೋಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.

ಸಾಗರ : ತಾಲ್ಲೂಕಿನ ಜೋಗದಲ್ಲಿ ಮನೆಯ ಸಮೀಪ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಜೋಗದ ನಿವಾಸಿ ಗಂಗಾಧರ್ (38) ಆತ್ಮಹತ್ಯೆ ಮಾಡಿಕೊಂಡವರು.ಗಂಗಾಧರ್ ಮದ್ಯವ್ಯಸನಿಯಾಗಿದ್ದು,ನಿನ್ನೆ ರಾತ್ರಿ ಸಹ ವಿಪರೀತ ಕುಡಿದು ಬಂದು ಪತ್ನಿ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ತದ ನಂತರ ಮನೆಯ ಹೊರಗೆ ಇರುವ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ನಿರ್ಮಲಾ ಭೇಟಿ ನೀಡಿ ಪರಿಶೀಲಿಸಿದರು.   

Read More

ಶಿವಮೊಗ್ಗ :ಅಕ್ರಮ ಗೋ ಸಾಗಾಣಿಕೆ ಆರೋಪಿಗಳನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳದ ಕಾರ್ಯಕರ್ತರು!!

ಶಿವಮೊಗ್ಗ : ತಡರಾತ್ರಿ ಸಮಾರು 9.30 ಆಸುಪಾಸುನಲ್ಲಿ ಹೊಸದುರ್ಗ- ಶಿವಮೊಗ್ಗ ಮಾರ್ಗವಾಗಿ ಶಿವಮೊಗ್ಗದ ಕಡೆಗೆ ಟಾಟಾ ಲಗೇಜ್ ಆಟೋ ಒಂದು ಹೋರಿಯನ್ನು,ತುಂಬಿಕೊಂಡು ಬರುತ್ತಿದ್ದ ಗಾಡಿಯನ್ನು ಗಮನಿಸಿದ ಅಭಿಷೇಕ್ ಹುಂಚ ಹಾಗೂ ಮತ್ತವರ ಸ್ನೇಹಿತರು ಅನುಮಾನಗೊಂಡು ಗಾಡಿಯನ್ನು ತಡೆದು ನಿಲ್ಲಿಸಿ,ವಿಚಾರಿಸಿ ಕೇಳಿದಾಗ ಗಾಡಿಯಲ್ಲಿದವರು, ಮಾಚೇನಹಳ್ಳಿ ಆಯನೂರು ಹತ್ತಿರ ಹೋಗುದಾಗಿ ಹೇಳಿದರು ,ಅನುಮಾನ ಹೆಚ್ಚಿದ್ದರಿಂದ ಗಾಡಿ ಅಲ್ಲೇ ನಿಲ್ಲಿಸಿ 112ಗೆ ಮಾಹಿತಿ ನೀಡಿ ಹತ್ತಿರದ ದೊಡ್ಡಪೇಟೆ ಠಾಣೆಗೆ  ಮಾಹಿತಿ ನೀಡಿ ಗಾಡಿ ತಲುಪಿಸಿ, ಸೂಕ್ತ ವಿಚಾರಣೆ ನೆಡೆಸಲು ಪೊಲೀಸ್ ಸಿಬ್ಬಂದಿಗಳ…

Read More

ಆರ್​ಎಸ್​​ಎಸ್​​ ಬಾಂಬ್​ ಹಾಕುವವರನ್ನ ತಯಾರು ಮಾಡುವ ಸಂಸ್ಥೆಯಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆರ್​​ಎಸ್​ಎಸ್​​​ ಸಂಘಟನೆ ದೇಶದ ಮೇಲೆ ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ. ದೇಶವನ್ನು ಪ್ರೀತಿ ಮಾಡೋರನ್ನು ತಯಾರು ಮಾಡುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ವೋಟ್ ಬ್ಯಾಂಕಿಗಾಗಿ ಏನೇನೋ ಹೇಳುತ್ತಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿದ ಮೇಲೆ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಕಾಂಪಿಟೇಷನ್ ನಡೆಯುತ್ತಿದೆ ಎಂದರು. ಸಿಂದಗಿ, ಹಾನಗಲ್​ ಉಪ…

Read More

ಶಿವಮೊಗ್ಗದಲ್ಲಿ ಮತಾಂತರ ಆರೋಪ : ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಂದ ಆಕ್ರೋಶ

ಶಿವಮೊಗ್ಗ : ಮನೆಯ ಸದಸ್ಯರು ಮತಾಂತರ ಆಗುತ್ತಿದ್ದಾರೆ ಎಂದು ಸ್ಥಳೀಯರು ನಗರದ ಮನೆಯೊಂದರ ಮುಂದೆ ಜಮಾಯಿಸಿದ ಘಟನೆ ನಗರದಲ್ಲಿ ನಡೆದಿದೆ. ಸಾಗರದ ಗೋಪಾಲಗೌಡ ನಗರದ 2ನೇ ತಿರುವಿನಲ್ಲಿರುವ ಮನೆಯೊಂದರಲ್ಲಿ ಮನೆಯ ಸದಸ್ಯರು ಮತಾಂತರ ಆಗುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಹಾಗೂ ಯುವಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಮನೆಯವರಲ್ಲಿ ಓರ್ವರಿಗೆ ಇತ್ತೀಚಿಗೆ ಅನಾರೋಗ್ಯ ಉಂಟಾಗಿತ್ತು.‌ ಅವರು ಸಾಕಷ್ಟು ವೈದ್ಯರ ಬಳಿ ತೋರಿಸಿದ್ದರು. ಆದರೂ, ಗುಣಮುಖರಾಗಿರಲಿಲ್ಲ. ಹೀಗಾಗಿ, ಪೂಜೆ ನಡೆಸಿದ್ದಾರೆ. ಈ ವೇಳೆ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ…

Read More

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read More