ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ!!! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರಗ ಜ್ಞಾನೇಂದ್ರರ ಪಾತ್ರ ಇದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್​ಕಾಯಿನ್ ವಿಷಯದಲ್ಲಿ ಗೃಹ ಸಚಿವರು ಬಾಲಿಷವಾಗಿ ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಲಘುವಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಟ್​ಕಾಯಿನ್ ವಿಷಯದ ಗಂಭೀರತೆ ಅರಿತು ಪ್ರಧಾನಿ ಮೋದಿ ರಾತ್ರೋರಾತ್ರಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಆರಗ ಜ್ಞಾನೇಂದ್ರ ರಾಜ್ಯಕ್ಕಲ್ಲ, ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಅವರ ಪಾತ್ರವಿದೆ. ಆದರೆ, ದುರಂತ ಎಂದರೆ ಇಂದು ಅವರೇ ಗೃಹ ಸಚಿವರಾಗಿದ್ದಾರೆ. ಕೋಮುಗಲಭೆ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

ಇನ್ನು ಇತ್ತೀಚೆಗಿನ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್​ನ ಹಲವರು ಕಾಂಗ್ರೆಸ್ ಸೇರಿದ್ದಾರೆ. ಜೊತೆಗೆ ಕಾಂಗ್ರೆಸ್ ಬೆಂಬಲಿತ ಸದಸ್ಯರು ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ಗೆಲುವಿಗೆ ಪೂರಕವಾದ ವಾತಾವರಣ ಕಂಡುಬರುತ್ತಿದೆ.

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾಯ್ದೆಗಳನ್ನು ವರ್ಷದ ನಂತರ ವಾಪಸ್ ಪಡೆದಿದ್ದಾರೆ. ಒಂದು ವರ್ಷದ ನಂತರ ಪ್ರಧಾನಿಗೆ ಅರಿವಾಯಿತೆ? ಮೊದಲೆ ಅರ್ಥ ಮಾಡಿಕೊಂಡಿದ್ದರೆ ಈ ಪ್ರಸಂಗ ಬರುತ್ತಿತ್ತಾ. ಹೋರಾಟದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಕೊಡಬೇಕು. ಬಿಜೆಪಿ ಜಾತಿ, ಧರ್ಮ, ಹಣದ ಆಧಾರದ ಮೇಲೆ ಚುನಾವಣೆ ನಡೆಸುತ್ತಿದೆ. ಜನರು ನೆರೆ ಹಾವಳಿಯಿಂದ ತೊಂದರೆ ಅನುಭವಿಸುತ್ತಿದ್ದರೆ, ಬಿಜೆಪಿಯವರು ಚುನಾವಣೆ ಕಡೆಗೆ ಗಮನ ಹರಿಸುತ್ತಿದ್ದಾರೆ ಎಂದು ಕಿಡಿಕಾರಿದರು.


“”ಗಾಂಧಿ-ನೆಹರು ವಿರುದ್ಧವಾಗಿ ಪುಸ್ತಕ ಬರೆಯುವವರ ವೈಯಕ್ತಿಕ ಬದುಕು ಕುಲಗೆಟ್ಟು ಹೋಗಿದೆ”” :: ಕಿಮ್ಮನೆ

ಗಾಂಧಿ ಹಾಗೂ ನೆಹರು ವಿರುದ್ಧವಾಗಿ ಪುಸ್ತಕ ಬರೆಯುವವರ ವೈಯಕ್ತಿಕ ಬದುಕು ಕುಲಗೆಟ್ಟು ಹೋಗಿದೆ ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಂಧಿ ಹಾಗೂ ನೆಹರು ವಿರುದ್ಧವಾಗಿ ಕೆಲವರು ಪುಸ್ತಕ ಬರೆಯುತ್ತಾರೆ. ಹೀಗೆ, ಪುಸ್ತಕ ಬರೆಯುವವರ ವೈಯಕ್ತಿಕ ಬದುಕು ಕುಲಗೆಟ್ಟು ಹೋಗಿದೆ. ಇವರು ತಮ್ಮ ಮಕ್ಕಳಿಗೆಯೇ ಮಾದರಿ ಆಗಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಚಕ್ರವರ್ತಿ ಸೂಲಿಬೆಲೆ ಪ್ರಧಾನಿ ನರೇಂದ್ರ‌ ಮೋದಿ ಚಿನ್ನದ ರಸ್ತೆ ಮಾಡುತ್ತಾರೆ. ದೇಶದ ಸಾಲ ತೀರಿಸಿದ್ದಾರೆ ಎನ್ನುತ್ತಿದ್ದಾರೆ. ಆದರೆ, ಸಾಲ ಮಾಡಿ ದೇಶಬಿಟ್ಟು ಓಡಿ ಹೋದವರು ಯಾರೂ ವಾಪಸ್ ಬಂದಿಲ್ಲ ಎಂದು ವ್ಯಂಗ್ಯವಾಡಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago