ಉಪ ಚುನಾವಣೆಯಲ್ಲಿ ಬಿಜೆಪಿ ಕವರ್ ನಲ್ಲಿ ಹಣ ಹಂಚಿದರೆ, ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಸಚಿವ ಈಶ್ವರಪ್ಪ ಆರೋಪ

ಶಿವಮೊಗ್ಗ : ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ ಕವರ್ ಹಂಚಿದೆ ಎಂಬ ಡಿಕೆಶಿ ಆರೋಪಕ್ಕೆ ಸಚಿವ ಈಶ್ವರಪ್ಪ ಟಾಂಗ್ ನೀಡಿದ್ದಾರೆ. ಬಿಜೆಪಿ ಕವರ್ ನೀಡಿದರೆ ಕಾಂಗ್ರೆಸ್ ನೇರವಾಗಿ ಹಣ ನೀಡಿದೆ ಎಂದು ಹೇಳುವ ಮೂಲಕ ಸಚಿವರು ಅಚ್ಚರಿ ಮೂಡಿಸಿದ್ದಾರೆ.

ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನವರು ಬಿಜೆಪಿ ಕವರ್ ನೀಡಿ ಚುನಾವಣೆ ಗೆಲ್ಲಲು ತಂತ್ರಗಾರಿಕೆ ಮಾಡುತ್ತಿದೆ ಎಂದು ಆರೋಪಿಸಿದೆ. ನಾವು ಕವರ್ ನಲ್ಲಿ ಕೊಟ್ಟರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ತಿರುಗೇಟು ನೀಡಿದರು.
ನಾವು ಕದ್ದುಮುಚ್ಚಿ ಹಣ ಹಂಚುತ್ತಿದ್ದೇವೆ ಎಂಬುದು ಅವರ ಲೆಕ್ಕ, ಆದರೆ ಕಾಂಗ್ರೆಸ್ ನೇರವಾಗಿ ಹಣ ಹಂಚುತ್ತಿದೆ ಎಂದು ಹೇಳುತ್ತಿದೆ. ಇದಕ್ಕೆ ಡಿಕೆಶಿ ಏನು ಉತ್ತರಿಸುತ್ತಾರೆ ಎಂದು ಪ್ರಶ್ನಿಸಿದ ಸಚಿವರು ಎಲ್ಲಾ ತಂತ್ರಗಾರಿಕೆಯನ್ನ ಮೂರು ಪಕ್ಷದವರು ಮಾಡುತ್ತಿವೆ. ಪಕ್ಷಗಳು ಪರಸ್ಪರ ಹಣ ಹಂಚಿಕೆಯ ಆರೋಪಗಳು, ಜಾತಿ ಆರೋಪಗಳು ತೋರಿಕೆಗೆ ಹೇಳುವಂತಹ ಪದಗಳು ಎಂದು ನೇರವಾಗಿ ಹೇಳಿದರು.

ಸಂಘಟನೆ, ಅಭಿವೃದ್ಧಿ ಮತ್ತು ನಾಯಕತ್ವದ ಅಡಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಎರಡೂ ಉಪಚುನಾವಣೆಯನ್ನ ಗೆಲ್ಲಲಿದ್ದಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

ಬಿಜೆಪಿಗೆ ಬೂತ್ ಮತ್ತು ಪೇಜ್ ಮಟ್ಟದ ಕಾರ್ಯಕರ್ತರಿದ್ದಾರೆ. ಎರಡೂ ಕ್ಷೇತ್ರದಲ್ಲಿಯೂ ಇಂತಹ ಕಾರ್ಯಕರ್ತರ ಮೂಲಕ ಮತ ಕೇಳಲು ಸಾಧ್ಯವಾಗಿದೆ. ಇದರ ಜೊತೆಗೆ ಪ್ರಧಾನಿ ಮೋದಿ ಹೆಸರಿನ ಬಲ ಪಕ್ಷಕ್ಕೆ ಮತ್ತು ಅಭ್ಯರ್ಥಿಗೆ ಇದೆ. ಹಾಗಾಗಿ ಮೂರು ಅಂಶದ ಮೇಲೆ ಬಿಜೆಪಿಯ ಅಭ್ಯರ್ಥಿಗಳು ಉಪ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದರು.

ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಜನ ಅಭಿವೃದ್ಧಿ ನೋಡಿ ಮತಹಾಕುತ್ತಾರೆ. ಬಿಎಸ್ ವೈ ಮಾಡಿದಂತಹ ಅಭಿವೃದ್ಧಿ ಮತ್ತು ಈಗಿನ ಸಿಎಂ ಬೊಮ್ನಾಯಿ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನ ನೋಡಿ ಜನ ಮತಹಾಕಲಿದ್ದಾರೆ ಎಂದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

4 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago