ಶಿವಮೊಗ್ಗ: ಕರ್ನಾಟಕ ಕಾನೂನು ವಿವಿ ನಿಗಧಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೇ ಇರುವುದರಿಂದಾಗಿ ಮೂರು ಮತ್ತು ಐದು ವರ್ಷದ ಕಾನೂನು ವಿದ್ಯಾರ್ಥಿಗಳು ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗುತ್ತದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಇಂದು ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಮತ್ತು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು.
2020ನೇ ಸಾಲಿನ ಡಿಸೆಂಬರ್ ನಲ್ಲಿ ನಿಗಧಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಕೋವಿಡ್ ಕಾರಣದಿಂದಾಗಿ 2021ರ ಮಾರ್ಚ್ನನಲ್ಲಿ ನೆಡೆಸಲಾಯಿತು. ಆದರೆ, ಫಲಿತಾಂಶವನ್ನು 7 ತಿಂಗಳ ನಂತರ ಪ್ರಕಟಿಸಲಾಯಿತು. ಮುಂದಿನ ಸೆಮಿಸ್ಟರ್ಗಳಿಗೆ ಪ್ರವೇಶ ಕೊಡುವುದು ಸಹ ತಡವಾಗಿದೆ. ಇದರಿಂದಾಗಿ 2023ಕ್ಕೆ ಮುಗಿಯಬೇಕಾಗಿದ್ದ ಕೋರ್ಸ್ಗಳು 2024ಕ್ಕೆ ಮುಗಿಯಲಿವೆ. ಇದರಿಂದ ವಿದ್ಯಾರ್ಥಿಗಳು ಹೆಚ್ಚುವರಿಯಾಗಿ ಒಂದು ವರ್ಷ ವ್ಯಾಸಂಗ ಮಾಡಬೇಕಾಗುತ್ತದೆ ಎಂದರು.
ಯುಜಿಸಿ ನಿಯಮಾವಳಿಯಂತೆ ಪರೀಕ್ಷೆಗಳನ್ನು ನಡೆಸಬೇಕು. ನಿಗಧಿತ ಪರೀಕ್ಷಾ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸಬೇಕು. ಈ ಬಗ್ಗೆ ವಿವಿಗೆ ರಾಜ್ಯಪಾಲರು ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಚಿನ್ಮಯ, ಮಂಜುನಾಥ್ ಡಿ.ಆರ್. ಸಮನ್ವಿ, ಸಿಂಚನ ಮೊದಲಾದವರಿದ್ದರು.
ರಿಪ್ಪನ್ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…