Breaking
12 Jan 2026, Mon

ಕಾಲೇಜು ವೇಳಾಪಟ್ಟಿ ಬದಲಾವಣೆಗೆ ವಿರೋದಿಸಿ ಸಾಗರ ಪದವಿ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ : ಕೂಡಲೇ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ

ಸಾಗರ : ನಗರದ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ವೇಳಾಪಟ್ಟಿ ಬದಲಾವಣೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜೊತೆ ಚರ್ಚಿಸದೆ ಏಕಾಏಕಿ ತಿರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಕಾಲೇಜಿನ ಎದುರು ಭಾಗದಲ್ಲಿ ಪ್ರತಿಭಟನೆ ನಡೆಸಿದ
ವಿದ್ಯಾರ್ಥಿಗಳು ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ ನೀಡುವಂತೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾಲೇಜು ವೇಳಾಪಟ್ಟಿ ಬದಲಾವಣೆ ಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ ನಡೆಸಿ ನಂತರ ತಿರ್ಮಾನ ಕೈಗೊಳ್ಳಬೇಕಿತ್ತು. ಈಗಿರುವ ವೇಳಾಪಟ್ಟಿಯಿಂದ ಹಲವಾರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಅನಾನುಕೂಲ ಆಗುತ್ತಿದೆ ಆದ್ದರಿಂದ ಕೊಡಲೇ ಶಾಸಕ ಹರತಾಳು ಹಾಲಪ್ಪ ಮದ್ಯ ಪ್ರವೇಶ ಮಾಡಿ ವೇಳಾಪಟ್ಟಿ ಬದಲಾವಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ವಿದ್ಯಾರ್ಥಿ ಪ್ರಮುಖರಾದ. ಪ್ರಶಾಂತ್. ಪ್ರದೀಪ್. ಹರೀಶ್. ಅಮೋಘ ಮತ್ತಿತರರು ಹಾಜರಿದ್ದರು.



ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ವೇಳಾಪಟ್ಟಿಯನ್ನು ರದ್ದುಪಡಿಸುವಂತೆ ವಿದ್ಯಾರ್ಥಿ ಒಕ್ಕೂಟದ ಸಿ ಎಂ ಚಿನ್ಮಯ್ ಆಗ್ರಹ
ಕಾಲೇಜು ವೇಳಾಪಟ್ಟಿಯ ಬದಲಾವಣೆಯನ್ನು ವಿದ್ಯಾರ್ಥಿಗಳ ಜೊತೆಗೆ ಸಮಾಲೋಚನೆ ನಡೆಸಿ ನಂತರ ತಿರ್ಮಾನ ಕೈಗೊಳ್ಳಬೇಕಿತ್ತು. ಈಗಿರುವ ವೇಳಾಪಟ್ಟಿಯಿಂದ ಹಲವಾರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಅನಾನುಕೂಲ ಆಗುತ್ತಿದೆ ಆದ್ದರಿಂದ ಕೊಡಲೇ ಶಾಸಕ ಹರತಾಳು ಹಾಲಪ್ಪ ಮದ್ಯ ಪ್ರವೇಶ ಮಾಡಿ ವೇಳಾಪಟ್ಟಿ ಬದಲಾವಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು  ಆಗ್ರಹಿಸಿ ಪ್ರತಿಭಟಿಸಲಾಯಿತು.
ನಂತರದಲ್ಲಿ ಸಾಗರದ ಉಪವಿಭಾಗಿಯ ಅಧಿಕಾರಿಗಳು ಬಂದು ವಿದ್ಯಾರ್ಥಿಗಳಿಗೆ  ಇನ್ನೂ 2 ತಿಂಗಳಲ್ಲಿ ಸಮಸ್ಯೆಯನ್ನು ಬಗೆಹರಿಸಿವುದಾಗಿ ಭರವಸೆ ನೀಡಿದರು. 

ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸಿಎಂ ಚಿನ್ಮಯ್,ಅವಿ ಭಂಡಾರಿ,ಸಚಿನ್,ಸೈಯದ್, ಆದಿತ್ಯ, ವರುಣ್ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತಿ ಇದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *