ರಿಪ್ಪನ್ ಪೇಟೆ : ಅಪರೇಶನ್ ಕಮಲಕ್ಕೆ ತುತ್ತಾಗಿರುವ ಮಹಾಲಕ್ಷ್ಮಿ ಅಣ್ಣಪ್ಪ ರವರು ನೈತಿಕ ಹೊಣೆ ಹೊತ್ತು ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್ ಹಾಗೂ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ಆಗ್ರಹಿಸಿದರು.
ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಕ್ಕೂ ನಿಷ್ಟೆ ತೋರದ ಮಹಾಲಕ್ಷ್ಮಿ ಅಣ್ಣಪ್ಪರವರು ನಿನ್ನೆ ದಿನ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಗ್ರಾಪಂ ಸದಸ್ಯರ ಬೆಂಬಲದಿಂದ ಗ್ರಾಪಂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ ಅಣ್ಣಪ್ಪ ರವರು ಕೇವಲ ತಮ್ಮ ಸ್ವಾರ್ಥಕ್ಕಾಗಿ,ಅಕ್ರಮ ಆಸ್ತಿಯನ್ನು ಉಳಿಸಿಕೊಳ್ಳುವ ಸಲುವಾಗಿ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಅವರ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಗೂ ನಷ್ಟ ಇಲ್ಲಾ ಹಾಗೇಯೆ ಬಿಜೆಪಿಗೂ ಲಾಭ ಇಲ್ಲಾ ಎಂದರು.
ಮಹಾಲಕ್ಷ್ಮಿ ಅಣ್ಣಪ್ಪರವರಿಗೆ ಬಿಜೆಪಿಯವರು ವೈಯಕ್ತಿಕ ತೊಂದರೆ ಕೊಟ್ಟಾಗ ಕಾಂಗ್ರೆಸ್ ಪಕ್ಷ ಅವರ ಬೆಂಬಲಕ್ಕೆ ನಿಂತಿತ್ತು ಈವಾಗ ಕೇವಲ ವೈಯಕ್ತಿಕ ಸ್ವಾರ್ಥಕ್ಕಾಗಿ ಪಕ್ಷ ಬದಲಾಯಿಸಿರುವುದು ಅವರ ರಾಜಕೀಯ ಅಧೋಗತಿಗೆ ಮುನ್ನುಡಿಯಾಗಲಿದೆ, ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಗ್ರಾಪಂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಮಹಾಲಕ್ಷ್ಮಿ ಅಣ್ಣಪ್ಪ ರವರು ನೈತಿಕ ಹೊಣೆ ಹೊತ್ತು ಕೂಡಲೇ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಅವರ ವಿರುದ್ದ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಈ ಸಂಧರ್ಭದಲ್ಲಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರುಗಳಾದ ಮಧುಸೂದನ್, ಧನಲಕ್ಷ್ಮಿ, ವೇದಾವತಿ ಪರಮೇಶ್,ಗಣಪತಿ,ಪ್ರಕಾಶ್ ಪಾಲೇಕರ್ ಹಾಗೂ ಕಾಂಗ್ರೆಸ್ ಮುಖಂಡರಾದ ರವೀಂದ್ರ ಕೆರೆಹಳ್ಳಿ,ಫ಼್ಯಾನ್ಸಿ ರಮೇಶ್ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಲ್ಲಾಸ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್