ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ 12 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಿಕಾರಿಪುರದಲ್ಲಿ 4, ಶಿವಮೊಗ್ಗದಲ್ಲಿ 3, ಉಳಿದ ತಾಲೂಕುಗಳಲ್ಲಿ ತಲಾ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 9,143 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ 2811 ಮತದಾರರಿದ್ದಾರೆ. ಭದ್ರಾವತಿಯಲ್ಲಿ 1202, ತೀರ್ಥಹಳ್ಳಿಯಲ್ಲಿ 730, ಹೊಸನಗರದಲ್ಲಿ 1052, ಸಾಗರದಲ್ಲಿ 839, ಸೊರಬದಲ್ಲಿ 510, ಶಿಕಾರಿಪುರದಲ್ಲಿ 1999 ಮತದಾರರಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಲ್ವರು ಸ್ಪರ್ಧಿಗಳ ಮಧ್ಯೆ ಹಣಾಹಣಿ ಇದೆ. ನಿಕಟಪೂರ್ವ ಜಿಲ್ಲಾಧ್ಯಕ್ಷ ಶಂಕರಪ್ಪ ಅವರು ಮರು ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ. ಈ ಹಿಂದೆ ಮೂರು ಭಾರಿ ಜಿಲ್ಲಾಧ್ಯಕ್ಷರಾಗಿ ಅನುಭವ ಹೊಂದಿರುವ ಡಿ.ಮಂಜುನಾಥ್ ಅವರು ಮತ್ತೊಮ್ಮೆ ಸ್ಪರ್ಧೆಗಿಳಿದಿದ್ದಾರೆ.
ಪತ್ರಕರ್ತರಾದ ಶಿ.ಜು.ಪಾಶ ಮತ್ತು ಗಾ.ರಾ.ಶ್ರೀನಿವಾಸ್ ಅವರು ಮೊದಲ ಭಾರಿ ಸ್ಪರ್ಧೆಗಿಳಿದಿದ್ದಾರೆ. ವಿನೂತನ ರೀತಿಯಲ್ಲಿ ಪ್ರಚಾರ ಮಾಡಿ ಮತದಾರರನ್ನು ಸೆಳೆಯಲು ಯತ್ನಿಸಿದ್ದಾರೆ.
ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆಗೆ ಮುಕ್ತಾಯವಾಗಲಿದೆ. ಬಳಿಕ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಸಂಜೆ 6 ಗಂಟೆ ಹೊತ್ತಿಗೆ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರು ಯಾರು ಅನ್ನುವುದು ಗೊತ್ತಾಗಲಿದೆ.
ಸದ್ಯ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುತ್ತಿದೆ. ಬೆಳಗ್ಗೆಯಿಂದಲೆ ಮತದಾರರು ಉತ್ಸಾಹದಿಂದ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕಡೆ ಕ್ಷಣದಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಪ್ರಯತ್ನಿಸುತ್ತಿರುವುದು ಅಲ್ಲಲ್ಲಿ ಕಂಡು ಬಂದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್