ತೀರ್ಥಹಳ್ಳಿ: ತಾಲೂಕು ಆಡಳಿತ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸಹಕಾರದಲ್ಲಿ ನಡೆಯುವ ರಾಜ್ಯೋತ್ಸವವನ್ನು ಸೋಮವಾರ ವಿಶಿಷ್ಠವಾಗಿ ಆಚರಿಸಲಾಗುತ್ತಿದೆ. ಪಟ್ಟಣದ ಗೋಪಾಲ ಗೌಡ ರಂಗಮಂದಿರದಲ್ಲಿ ಹಬ್ಬದ ವಾತಾವರಣಕ್ಕೆ ಸಾಂಸ್ಕೃತಿಕ ಸ್ಪರ್ಶವನ್ನು ನೀಡಲಾಗಿದೆ.
ಕೊರೊನಾ ಸೋಂಕಿನ ಕಾರಣ ಎರಡು ವರ್ಷಗಳಿಂದ ಅಷ್ಟೊಂದು ಸಂಭ್ರಮಾಚರಣೆ ಇರಲಿಲ್ಲ. ಈ ವರ್ಷ ಉತ್ತಮವಾಗಿ ಆಚರಿಸಬೇಕು ಎನ್ನುವ ಆಶಯ ತಾಲೂಕಿನ ಜನತೆಯಲ್ಲಿತ್ತು. ಆದರೆ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಸಮಾರಂಭ ತಾಲೂಕಿನಲ್ಲಿ ಆಚರಿಸುತ್ತಿದ್ದು ಈ ಬಾರಿಯೂ ಸಮಾರಂಭ ಹಮ್ಮಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಜನತೆಗೆ ಮಾಹಿತಿಯನ್ನು ನೀಡುವ ಮಾಧ್ಯಮಗಳಿಗೆ ಸಮಾರಂಭದ ಸೂಚನೆ ಕೊಟ್ಟಿಲ್ಲ.
ಹೀಗಾಗಿ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಪತ್ರಿಕಾ ವರದಿಗಾರರು ಹೋಗಬೇಕೋ ಬೇಡವೋ ಎನ್ನುವ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ ಮುಂದಾದರೂ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕ್ರಮ ಕೈಗೊಳ್ಳಲಿ. ಹಾಗೆಯೇ ಪ್ರತಿ ಸರ್ಕಾರಿ ಕಾರ್ಯಕ್ರಮಗಳು, ಕನ್ನಡಪರ ಕಾರ್ಯಕ್ರಮಗಳು, ಸರ್ಕಾರಿ ಹಬ್ಬಗಳು ಮನೆಮನೆಗೆ ತಲುಪುವಂತಾಗಲಿ.
ವರದಿ : ಶ್ರೀಕಾಂತ್. ವಿ.ನಾಯಕ್. ತೀರ್ಥಹಳ್ಳಿ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್