ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.
ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು.
ಬಹಳ ಜನ ನನಗೆ ದಿನವೂ ಸೆಲ್ಯೂಟ್ ಹೊಡೆಯುತ್ತಾರೆ. ನನಗೆ ಈಗಲೂ ನಮಸ್ಕಾರ ಮಾಡಲು ಬರುತ್ತಿಲ್ಲ. ಎಲ್ಲರಿಗೂ ಸೆಲ್ಯೂಟ್ ಹೊಡೆದು ಹೊಡೆದು ರೂಢಿ ಆಗಿ ಹೋಗಿದೆ. ಅಲಂಕಾರಕ್ಕಾಗಿ ಇದೆಲ್ಲಾ ನನಗೆ ಬೇಡ ಎಂದು ನಮ್ಮ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಹೇಳಿದ್ದೇನೆ ಎಂದು ತಿಳಿಸಿದರು.
ನಾನು ಗೃಹ ಸಚಿವನಾಗಿ ರಿಸ್ಕಿ ಕೆಲಸ ಮಾಡುತ್ತಿರುತ್ತೇನೆ ನಿಜ. ರಿಸ್ಕ್ ತೆಗೆದುಕೊಂಡು ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ನನಗೆ ಜೀರೋ ಟ್ರಾಫಿಕ್ ಬೇಡ ಅಂತಾ ನಾನು ಈ ಹಿಂದೆಯೇ ಹೇಳಿದ್ದೆ. ನಾನು ಟ್ರಾಫಿಕ್ನಲ್ಲಿ ನಿಂತಾಗ ನಾನೇ ಬೈದುಕೊಂಡಿದ್ದೇನೆ.
ನಮ್ಮ ಅಲಂಕಾರಕ್ಕಾಗಿ ಈ ಖುರ್ಚಿ ಇರಬಾರದು. ಹತ್ತು ನಿಮಿಷ ಲೇಟ್ ಆದರೆ, ತಲೆ ಏನು ಹೋಗುವುದಿಲ್ಲ. ಸಿಗ್ನಲ್ ಫ್ರೀ ಬಿಟ್ಟರೆ ಸಾಕು, ಆಗ ನಾವು ಪಾಸಾಗಬಹುದು. ಇನ್ನೊಬ್ಬರಿಗೆ ತೊಂದರೆ ಕೊಟ್ಟು ಜೀರೋ ಟ್ರಾಫಿಕ್ ಮಾಡಿಕೊಂಡು ಹೋಗುವುದು ನನಗೆ ಇಷ್ಟವಿಲ್ಲ ಎಂದು ಸ್ಪಷ್ಟಪಡಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್