Breaking
13 Jan 2026, Tue

ನಾನು ಕ್ಷೇತ್ರದಲ್ಲಿ ಇರುವುದು ಕಿಮ್ಮನೆ ಅವರಿಗೆ ಸಹಿಸಲು ಆಗುತ್ತಿಲ್ಲ – ಆರಗ ಜ್ಞಾನೇಂದ್ರ

ಶಿವಮೊಗ್ಗ : ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ 
ಗೃಹಸಚಿವರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಿನ್ನೆ ಟೀಕಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನು ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವನಲ್ಲ. ಇಡೀ ರಾಜ್ಯಕ್ಕೆ ನಾನು ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಂತ ಕ್ಷೇತ್ರದಲ್ಲಿ ಕೆಲಸ ಮಾಡುವುದು ಕಿಮ್ಮನೆ ಅವರಿಗೆ ಇಷ್ಟ ಇಲ್ಲದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಿಮ್ಮನೆ ಮತ್ತು ಮಂಜುನಾಥ ಗೌಡರು ನಿರಂತರ ಪಾದಾಯಾತ್ರೆ ಮಾಡುತ್ತಾರೆ.

ಅವರು ಪಾದ ಯಾತ್ರೆ ಮಾಡುವುದನ್ನು ಬಿಡುತ್ತಾರೆಯೇ ಎಂದು ಪ್ರಶ್ನಿಸಿದ ಸಚಿವರು ಕ್ಷೇತ್ರದಲ್ಲಿ ಕೆಲಸ ಮಾಡುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಅನಿಸುತ್ತೆ ಎಂದು ಅನುಮಾನ
ವ್ಯಕ್ತಪಡಿಸಿದರು.

ಇನ್ನು ಬಿಟ್ ಕಾಯಿನ್ ಕುರಿತು ಕಾಂಗ್ರೆಸ್ ಈಗ ಸೈಲೆಂಟ್ ಆಗಿದೆ ಈಗಾಗಲೇ ಈ ಪ್ರಕರಣದ ಕುರಿತು ಅಗತ್ಯ ಕ್ರಮ ವಹಿಸಿದ್ದೇವೆ. ಯಾರೇ ಪ್ರಭಾವಿಗಳಿದ್ದರೂ ಅವರ ವಿರುದ್ದ ಕ್ರಮ
ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಜನ ಸ್ವರಾಜ್ ಸಮಾವೇಶಕ್ಕೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ. ಮಳೆಯಿಂದ ರಾಜ್ಯದ ವಿವಿಧ
ಜಿಲ್ಲೆಯಲ್ಲಿ ಹಾನಿ ಆಗಿದೆ. ನಾನು ಕೂಡಾ ಮಳೆ ಹಾನಿಯ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಸಿಎಂ ಕೂಡಾ ಈಗಾಗಲೇ ಭೇಟಿ ನೀಡಿದ್ದಾರೆ. ಮಳೆ ಅವಾಂತರದಿಂದ ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿ ಆಗಿದೆ. ಅನೇಕ
ಭಾಗದಲ್ಲಿ ಮನೆಗಳು ಕುಸಿದು ಬಿದ್ದಿವೆ. ಶೀಘ್ರದಲ್ಲೇ ಸಂತ್ರಸ್ತರಿಗೆ ಪರಿಹಾರ ಕ್ಕೆ ಕ್ರಮ ವಹಿಸಲಾಗಿದೆ ಎಂದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *