ಶಿವಮೊಗ್ಗ : ಇಲ್ಲಿನ ಸಮೀಪದ ಹರಮಘಟ್ಟದ ಆಲದಹಳ್ಳಿಯಲ್ಲಿ ನಿನ್ನೆ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಸುಮಾರು 60 ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ 21 ಜನ ದಾಖಲಾಗಿದ್ದಾರೆ.
ನಿನ್ನೆ ಆಲದಹಳ್ಳಿ ದೊಡ್ಡೇರಿ ಕುಟುಂಬದವರ ಎರಡು ಜೋಡಿ ಮದುವೆಯ ಆರತಕ್ಷತೆಗೆ ಹಾಜರಾದ ಹರಮಘಟ್ಟ ಮತ್ತು ಆಲದಹಳ್ಳಿ ಗ್ರಾಮಸ್ಥರು ನಿನ್ನೆ ರಾತ್ರಿ ಊಟ ಮಾಡಿದ್ದಾರೆ.ಮರುದಿನ ಮಧ್ಯಾಹ್ನದಿಂದ ರಿಯಾಕ್ಷನ್ ಆಗಲು ಆರಂಭವಾಗಿದೆ.ಕೆಲ ಗ್ರಾಮಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವರು ಹೊಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಳಲೂರಿನ ಆಸ್ಪತ್ರೆ ತುಂಬಿ ಹೋದ ಹಿನ್ನಲೆಯಲ್ಲಿ ಮೆಗ್ಗಾನ್ ಗೆ ಬಂದು ದಾಖಲಾಗಿದ್ದಾರೆ. ಫುಡ್ ಪಾಯಿಸನ್ ಆದವರ ಸಂಖ್ಯೆ 200 ಕ್ಕೆ ಏರುವ ಸಾಧ್ಯತೆ ಇದೆ ಎಂದು ದಾಖಲಾದವರು ತಿಳಿಸಿದ್ದಾರೆ.
ನಿನ್ನೆ ಮದುವೆಯ ಆರತಕ್ಷತೆಯಲ್ಲಿ ಮಾಡಿರುವ ಊಟದಿಂದ ಫುಡ್ ಪಾಯಿಸನ್ ಆಗಿದೆ ಎಂದು ಹೊಳಲೂರಿನಲ್ಲಿ ವೈದ್ಯರು ತಿಳಿಸಿದ್ದಾರೆ ಎಂದು ಮೆಗ್ಗಾನ್ ನಲ್ಲಿ ಅಡ್ಮಿಟ್ ಆಗಿರುವ ರೋಗಿಯೊಬ್ಬರು ತಿಳಿಸಿದ್ದಾರೆ.
ಕೆಲವರಿಗೆ ವಾಂತಿ ಆದರೆ ಕೆಲವರಿಗೆ ಬೇದಿ ಆಗಿದೆ. ತಲೆ ನೋವು, ಸುಸ್ತು, ಚಳಿ ಮತ್ತು ಜ್ವರ ಕಾಣಿಸಿಕೊಂಡಾಗ ಹೊಳಲೂರಿನ ಆಸ್ಪತ್ರೆಗೆ ತೋರಿಸಿದಾಗ ಫುಡ್ ಪಾಯಿಸನ್ ಮೆಗ್ಗಾನ್ ಗೆ ದಾಖಲಾಗಲು ವೈದ್ಯರು ಶಿಫಾರಸು ಮಾಡಿದರು ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್