ನೇರಲೆ ಮನೆ ದೇವಸ್ಥಾನದ ಜಾಗಕ್ಕೆ ಬೇಲಿ ಹಾಕಲು ಮುಂದಾದ ವ್ಯಕ್ತಿ !!! ಕೇಳಲು ಹೋದ ಗ್ರಾಮಸ್ಥರಿಗೆ ಕೊಲೆಬೆದರಿಕೆ ? ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು !!! ಹಾಗಾದರೆ ಆ ವ್ಯಕ್ತಿ ಯಾರು ??

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ನೇರಳಮನೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ದೇವಸ್ಥಾನಕ್ಕಾಗಿ ಮೀಸಲಿಟ್ಟಿದ್ದ 20ಗುಂಟೆ ಜಾಗವನ್ನು ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ತನ್ನ ಹಣದ ಪ್ರಭಾವ ಬಳಸಿ  ಬೇಲಿ ಹಾಕಲು ಮುಂದಾಗಿದ್ದು ತಡೆಯಲು ಹೋದ ಗ್ರಾಮಸ್ಥರನ್ನು ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ ಹಾಕಿರುವ  ಘಟನೆ ನಡೆದಿದೆ.
ಇಂದು ರಿಪ್ಪನ್ ಪೇಟೆ ಗ್ರಾಪಂ ಸಭಾಂಗಣದಲ್ಲಿ ಪತ್ರೀಕಾ ಗೋಷ್ಟಿ ನಡೆಸಿ ಮಾತನಾಡಿದ ನೇರಲಮನೆ ಗ್ರಾಮಸ್ಥರು
ದೇವಸ್ಥಾನದ ಜಾಗವನ್ನು ಅಕ್ರಮಿಸಿಕೊಂಡಿರುವ ಬಗ್ಗೆ ನೇರಳಮನೆ ಗ್ರಾಮಸ್ಥರೆಲ್ಲಾ ಸೇರಿ ನಾಗೇಶ್ ಅಲಿಯಾಸ್ ಬಡ್ಡಿ ನಾಗೇಶ್ ಎಂಬ ವ್ಯಕ್ತಿಯನ್ನು ಕೇಳಲು ಹೋದಾಗ ಗ್ರಾಮಸ್ಥರನ್ನು ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನೇರಲಮನೆ ಗ್ರಾಮಸ್ಥರು ಆರೋಪಿಸಿದ್ದಾರೆ.
ನಾಗೇಶ್ ಎಂಬ ವ್ಯಕ್ತಿ ಅವಾಚ್ಯವಾಗಿ ನಿಂದಿಸಿ,ಕೊಲೆ ಬೆದರಿಕೆ ಹಾಕಿರುವುದನ್ನು ವೀಡಿಯೋ ಮಾಡಿಕೊಂಡಿದ್ದು ಸದರಿ ವೀಡೀಯೋವನ್ನು ಲಗತ್ತಿಸಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಾಳೂರು ಗ್ರಾಮ ಪಂಚಾಯಿತಿಯ ನೇರಲಮನೆ ಗ್ರಾಮದ ಸರ್ವೇ ನಂ 01 ರಲ್ಲಿ ಸುಮಾರು 400 ಎಕರೆ ಅರಣ್ಯ ಪ್ರದೇಶ ಇದ್ದು, ಸದರಿ ಅರಣ್ಯದಲ್ಲಿ ಸುಮಾರು ಬಾಗ ಪ್ರಭಾವಿಗಳಿಂದ ಈಗಾಗಲೇ ಒತ್ತುವರಿಯಾಗಿದ್ದು,ಕೇವಲ ಅಲ್ಪ ಸ್ವಲ್ಪಅರಣ್ಯ ಪ್ರದೇಶ ಉಳಿದಿದ್ದು ಅದನ್ನು ಸಹ ಕೆಲ ಪ್ರಬಾವಿಗಳು,ಹಾಗು ಬಡ್ಡಿ ಮಾಫ಼ಿಯಾದವರು ಕೆಲ ಅರಣ್ಯ ಸಿಬ್ಬಂದಿಗಳೊಂದಿಗೆ ಶಾಮೀಲಾಗಿ ಭೂ ಕಬಳಿಕೆ ಮಾಫ಼ಿಯಾ ನಡೆಸುತ್ತಿದ್ದಾರೆ ಎಂದು ಹೋರಾಟಗಾರರಾದ ದೇವರಾಜ್ ಹಾಲುಗುಡ್ಡೆ ಆರೋಪಿಸಿದ್ದಾರೆ.
ಈಗಾಗಲೇ ನೇರಲಮನೆ ಗ್ರಾಮಸ್ಥರು ದೇವಸ್ಥಾನ ನಿರ್ಮಿಸಲು ದೇಣಿಗೆ ಸಂಗ್ರಹಿಸುವಲ್ಲಿ ನಿರತರಾಗಿದ್ದು ಸದರಿ ಜಾಗದಲ್ಲಿ ಭವ್ಯವಾಗಿ ಗಣಪತಿ ದೇವಸ್ಥಾನವನ್ನು ನಿರ್ಮಿಸಲು ಸಿದ್ದತೆ ನಡೆಸಿಕೊಂಡಿದ್ದು ಕೆಲ ಪ್ರಭಾವಿ ವ್ಯಕ್ತಿಗಳಿಂದ ದೇವರ ಕಾರ್ಯ ಕುಂಠಿತವಾಗುತ್ತಿರುವುದಕ್ಕೆ ಬೇಸರವಾಗುತ್ತಿದೆ ಎಂದು ಈ ಸಂಧರ್ಭದಲ್ಲಿ ಗ್ರಾಮಸ್ಥರಾದ ವೀರೇಂದ್ರ ಆರೋಪಿಸಿದ್ದಾರೆ.

ಈ ಕೂಡಲೇ ಇದಕ್ಕೆ ಸಂಬಂದಪಟ್ಟಂತೆ ಕಂದಾಯ ಅಧಿಕಾರಿಗಳು,ಪೊಲೀಸ್ ಇಲಾಖೆ ,ಮುಜರಾಯಿ ಇಲಾಖೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ದೇವಸ್ಥಾನದ ಜಾಗವನ್ನು ತೆರವುಗೊಳಿಸಿಕೊಡಬೇಕಾಗಿ ಆಗ್ರಹಿಸಿದರು.

ಈ ಪತ್ರೀಕಾ ಗೋಷ್ಟಿಯಲ್ಲಿ ಗ್ರಾಮಸ್ಥರಾದ ಚಂದ್ರಶೇಖರ್,ಸುರೇಶ್ ,ಆನಂದ ,ಕೃಷ್ಣಪ್ಪ ,ರಾಘವೇಂದ್ರ, ರಾಮು,ಯುವರಾಜ ,ರೇವಣ್ಣ ,ನಾಗರಾಜ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.




ಗ್ರಾಮಸ್ಥರಿಗೆ ಬೆದರಿಕೆ ಹಾಕಿರುವ ವೀಡಿಯೋ ಈ ಕೆಳಗೆ ವೀಕ್ಷಿಸಿ:









ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…

7 hours ago

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ

ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್‌ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…

9 hours ago

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ

ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…

10 hours ago

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ

ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…

10 hours ago

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು

ಬಾವಿಗೆ ಬಿದ್ದು ನಿವೃತ್ತ ಕುಲಪತಿ ಪ್ರೊ. ಎಂ.ಕೆ. ನಾಯ್ಕ್ ಸಾವು Retired Vice Chancellor Prof. M.K. Naik, 63,…

11 hours ago

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

1 day ago