ಮಲೆನಾಡಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಗೂಂಡಾ ವರ್ತನೆ ತೊರಿದ್ದು. ಮನೆಯ ಬಾಗಿಲು, ಹಂಚು ಮುರಿದು ರೌಡಿಗಳಂತೆ ಪೊಲೀಸರು ಮನೆಯ ಒಳ ಭಾಗವನ್ನು ಪ್ರವೇಶಿಸಿದ್ದಾರೆ ಎಂದು ಕುಟುಂಬದ ಸದಸ್ಯರಿಂದ ಪೋಲಿಸರ ಮೇಲೆ ಆರೋಪ ಕೇಳಿಬಂದಿದೆ.
ಕಡೂರು ತಾಲೂಕಿನ ಮುಸ್ಲಾಪುರ ಗ್ರಾಮದಲ್ಲಿ ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಬಾರ್ ವಿರುದ್ಧ ಸ್ಥಳೀಯರು ಪ್ರತಿಭಟಿಸಿದ್ದರು.
ಅಪ್ರಾಪ್ತ ಬಾಲಕ, ಮೂವರು ಮಹಿಳೆಯರು ಸೇರಿ 7 ಜನರನ್ನ ಖಾಕಿ ಪಡೆ ಎಳೆದೊಯ್ದಿದ್ದಾರೆ ಎಂದು ಕುಟುಂಬದ ಓರ್ವ ಸದಸ್ಯರು ಆರೋಪಿಸಿದ್ದಾರೆ.ಒಂದೇ ಮನೆಯ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಕಡೂರು ಪಿಎಸೈ ರಮ್ಯಾ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ತಾಲ್ಲೂಕಿನ ಎಮ್ಮೆದೊಡ್ಡಿ ಬಳಿ ಮುಸ್ಲಾಪುರಹಟ್ಟಿಯಲ್ಲಿ ಬಾರ್ ತೆರೆದಿರುವುದನ್ನು ವಿರೋಧಿಸಿ ನ. 12 ರಂದು ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ರಮ್ಯಾ ನೇತೃತ್ವದ ತಂಡದವರು ಗ್ರಾಮಕ್ಕೆ ತೆರಳಿ ಮನೆಯೊಳಗಿದ್ದ ಐವರನ್ನು ಬಂಧಿಸಿದ್ದಾರೆ.
ತನಿಖೆಗೆ ಗ್ರಾಮಕ್ಕೆ ತೆರಳಿದ್ದ ಪೊಲೀಸರು ಮನೆಯೊಳಗಿದ್ದ ಪ್ರೇಮಾಬಾಯಿ, ಜಾನಿಬಾಯಿ, ಕಿರಣ್, ಮಲ್ಲೇಶ್, ಶೀಲಾಬಾಯಿ ಎಂಬವರನ್ನು ಬಂಧಿಸಿದ್ದಾರೆ.
ಕಡೂರು ಪಿಎಸ್ ಐ ರಮ್ಯಾ ಸ್ಪಷ್ಟನೆ :
ಪಿಎಸ್ಸೈ ರಮ್ಯಾ ಇದರ ಬಗ್ಗೆ ಸ್ಪಷ್ಟೀಕರಣ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದೇವೆ. ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ’ ಎಂದು ತಿಳಿಸಿದ್ದಾರೆ.
‘ಚಾವಣಿಯ ಹೆಂಚು ತೆಗೆದು, ಬಾಗಿಲು ಮುರಿದು ಮನೆಯೊಳಕ್ಕೆ ನುಗ್ಗಿ ಬಂಧಿಸಿದ್ದೇವೆಂದು ಆರೋಪಿಗಳು ಕಥೆ ಕಟ್ಟಿದ್ದಾರೆ. ಅದರಲ್ಲಿ ಹುರುಳಿಲ್ಲ’ ಎಂದು ಪಿಎಸ್ಐ ರಮ್ಯಾ ತಿಳಿಸಿದ್ದಾರೆ.
ಒಟ್ಟಾರೆ ಪೊಲೀಸರ ಹೇಳಿಕೆ ಸರಿಯೋ ಅಥವಾ ಕುಟುಂಬದ ಸದಸ್ಯರ ಹೇಳಿಕೆ ಸರಿಯೋ ಎಂಬುದು ಉನ್ನತ ತನಿಖೆಯಿಂದ ಸಾರ್ವಜನಿಕರಿಗೆ ತಿಳಿಯಬೇಕಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್