ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು
ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ.
ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ ಹಾನಿಯಾಗಿದೆ. ಇನ್ನು ಮೆಕ್ಕೆಜೋಳ ಬೆಳೆಯೂ ಸಂಪೂರ್ಣ ನಾಶವಾಗಿದ್ದು, ಭತ್ತಬೆಳೆ ಗದ್ದೆಯಲ್ಲೇ ಮೊಳಕೆ ಬರುವ ಸ್ಥಿತಿಗೆ ತಲುಪಿದೆ..ಕಟಾವಿಗೆ ಬಂದ ಭತ್ತ ಗದ್ದೆಗಳಿಗೆ ನೀರು ನುಗ್ಗಿದ ಪರಿಣಾಮ, ಇನ್ನು ಬಾರಿ ಪ್ರಮಾಣದಲ್ಲಿ ನಷ್ಟವಾಗಿದ್ದು, ಪ್ರಮುಖ ಆಹಾರ ಬೆಳೆ ಕೈಗೆ ಸಿಗದೇ ನೀರಿನಲ್ಲಿ ತೇಲುವ ಸ್ಥಿತಿ ಕಂಡು ರೈತರು ಅಕ್ಷರಶಃ ಸಹ ದಿಕ್ಕೆಟ್ಟು ನಿತ್ತಿದ್ದಾರೆ.
ಲಭ್ಯವಿರುವ ಮಾಹಿತಿಯಂತೆ ಮಲೆನಾಡಿನಲ್ಲಿ ಸುರಿದ ಭಾರೀ ಮಳೆಗೆ 87 ಹೆಕ್ಟೇರ್ ಅಧಿಕ ಭತ್ತ 15 ಹೆಕ್ಟೇರ್ ಮೆಕ್ಕೆಜೋಳ ಮತ್ತು , 30 ಹೆಕ್ಟೇರ್‌ನಷ್ಟು ತೋಟಗಾರಿಕಾ ಬೆಳೆ ಹಾಗೂ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಳೆಗೆ ತೀವ್ರಹಾನಿಯಾಗಿದ್ದು ಈಗಾಗಲೇ ಕೊನೆಕೊಯ್ಲು ಮುಗಿಸಿದ ರೈತರು ಅಡಿಕೆಯನ್ನ ಬೇಯಿಸಿ ಹದಗೊಳಿಸಲು ಬಿಸಿಲನ್ನು ಕಾಣದೆ ಅಡಿಕೆ ಹೂ ಬಂದು, ಒಣಗಿಸಿಸಲು  ಪರ್ಯಾಯವಾಗಿ,ಹೊಗೆ ತಟ್ಟಿ, ಪಾಲಿ ಹೌಸ್  , ಮೊರೆ ಹೋಗಿದ್ದಾರೆ. ಹಾಗೂ ಇನ್ನು ಅನೇಕ  ಉಪಕ್ರಮ ಅನುಸರಿಸಿದರೂ, ಸಹ ಉತ್ತಮ ಗುಣಮಟ್ಟದ ಅಡಿಕೆಯನ್ನ ನೈಸರ್ಗಿಕವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ….ಇಂದು ಸಹ ಮೋಡಕವಿದ ವಾತಾವರಣವಿದ್ದು, ಮತ್ತೆ ಮಳೆಯಾದರೆ ಕೈಗೆ ಬಂದ ತುತ್ತು ಬಾಯಿಗೆ ಬರದೇ ಹೋದರೆ ಎನ್ನುವ ಭೀತಿಯಲ್ಲೇ ದಿನ ದೂಡುತ್ತಿದ್ದಾರೆ ಅಡಿಕೆ ಬೆಳೆಗಾರರು.
ಈ ಕೊಡಲೇ ಸರ್ಕಾರ, ಹಾಗೂ ಸಂಬಂಧಪಟ್ಟ ಇಲಾಖೆ ಬೆಳೆ ಸಮೀಕ್ಷೆ ನೆಡೆಸಿ,ಸಂಕಷ್ಟಕ್ಕೆ ಸಿಲುಕಿದ ಮಲೆನಾಡ ರೈತರ ಹಿತಕಾಪಾಡಲಿ ಎಂಬ ಕೂಗು ಕೇಳಿಬರುತ್ತಿದೆ.
ಇನ್ನು ಮನೆಗಳಿಗೂ ಸಹ ಹಾನಿಯಾಗಿದ್ದು, ಶಿವಮೊಗ್ಗದಲ್ಲಿ 7, ಭದ್ರಾವತಿಯಲ್ಲಿ 9 ಮನೆ ಸೇರಿದಂತೆ ಒಟ್ಟು 16 ಮನೆಗಳು ಸಂಪೂರ್ಣ ಕುಸಿತಗೊಂಡಿದೆ. ಅಲ್ಲದೇ ಜಿಲ್ಲೆಯ 101 ಮನೆಗಳಿಗೆ ಮಳೆಯಿಂದ ಭಾಗಶಃ ಹಾನಿಯಾಗಿದೆ. ಇನ್ನೂ ನೂರಕ್ಕೂ ಹೆಚ್ಚು ಮನೆಗಳು ಬೀಳುವ ಆತಂಕದಲ್ಲಿದೆ.
ವರದಿ :ಅಜಿತ್ ಗೌಡ ಬಡೇನಕೊಪ್ಪ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

40 minutes ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

54 minutes ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

8 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

12 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

12 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

24 hours ago