ಶಿವಮೊಗ್ಗ: ಹಾನಗಲ್ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು.
ಪ್ರಾದೇಶಿಕ ಪಕ್ಷಗಳಿಗೆ ಯಾವುದೇ ಸ್ಥಾನ ಇಲ್ಲ ಎಂದು ಮೊನ್ನೆ ನಡೆದ ಚುನಾವಣೆಯಲ್ಲಿ ಗೊತ್ತಾಗಿದೆ. ಬಿಜೆಪಿ ದೊಡ್ಡ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮುತ್ತಿದೆ. ಕಾಂಗ್ರೆಸ್ ಕೂಡ ಪ್ರಾದೇಶಿಕ ಪಕ್ಷವಾಗಿ ಕುಗ್ಗುತ್ತಿದೆ.
ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆಯ ಕ್ಷೇತ್ರದಲ್ಲಿ ಸೋತಿದ್ದಾರೆ. ನಾನು ಒಪ್ಪಿಕೊಳ್ಳುತ್ತೇನೆ. ಚಾಮುಂಡೇಶ್ವರಿಯಲ್ಲಿ ಸ್ವತಃ ಸಿಎಂ ಆಗಿದ್ದ ಸಿದ್ದರಾಮಯ್ಯನವರೇ ಸೋತಿದ್ದಾರೆ. ಜೆ.ಹೆಚ್.ಪಟೇಲ್ ಸಿಎಂ ಆಗಿ ಚನ್ನಗಿರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಇದಕ್ಕೆಲ್ಲಾ ಕಾಂಗ್ರೆಸ್ನವರು ಏನು ಹೇಳ್ತಾರೆ. ಒಂದೇ ಒಂದು ಸೋಲು ಎಲ್ಲವನ್ನೂ ತೀರ್ಮಾನ ಮಾಡಲ್ಲ.
ನಾವು ಲೋಕಸಭೆ, ಉಪಚುನಾವಣೆ, ಪಾಲಿಕೆ ಹಲವೆಡೆ ಗೆದ್ದಿದ್ದೇವೆ. ಗೆಲುವೇ ಬಿಜೆಪಿಯ ತೀರ್ಮಾನ, ಜನ ಕೂಡ ನಮ್ಮನ್ನು ಬೆಂಬಲಿಸುತ್ತಿದ್ದಾರೆ. ಮುಳುಗುವ ಪಕ್ಷಕ್ಕೆ ಹಾನಗಲ್ ಜನರು ಜೀವ ಕೊಟ್ಟಿದ್ದಾರೆ, ದಯೇ ತೋರಿಸಿದ್ದಾರೆ. ಸಿದ್ದರಾಮಯ್ಯ ಹೇಳಿದ ಪ್ರತಿಯೊಂದು ಕೂಡ ಸುಳ್ಳಾಗುತ್ತೆ. ಮೊದಲು ಅವರು ಅವರ ಪಕ್ಷದ ಗುಂಪುಗಾರಿಕೆ ಸರಿ ಮಾಡಿಕೊಳ್ಳಲಿ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್