ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ.
ರಾಜಧಾನಿ ಹಾಗೂ ಕರಾವಳಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತ ಇದಾಗಿದ್ದು ಹಲವು ದಿನಗಳಿಂದ ರಸ್ತೆ ಹದಗೆಟ್ಟಿ,ದೊಡ್ಡ ಗುಂಡಿ ಬಿದ್ದಿದ್ದರು ಯಾವ ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.
ಸಾಮಾಜಿಕ ಹೋರಾಟಗಾರರಾದ ಟಿ ಆರ್ ಕೃಷ್ಣಪ್ಪ ಇಂದು ಗುಂಡಿ ಬಿದ್ದ ಜಾಗದಲ್ಲಿಯೇ ಕುರ್ಚಿ ಹಾಕಿ ಕುಳಿತು ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು.
ನಂತರ ಮಾತನಾಡಿದ ಅವರು ಭಾರತದಲ್ಲಿ ಸ್ವಚ್ಚ ಭಾರತ್ ಅಭಿಯಾನಕ್ಕಿಂತ ಹೆಚ್ಚಾಗಿ “ರಸ್ತೆಯ ಗುಂಡಿ ಮುಚ್ಚೋ ಭಾರತ್” ಅಭಿಯಾನ ನಡೆಸುವ ಅಗತ್ಯತೆ ಹೆಚ್ಚಿದೆ,ಚಿನ್ನದ ರಸ್ತೆಯ ಭರವಸೆ ಕೊಟ್ಟವರು ಕೊನೆ ಪಕ್ಷ ಗುಂಡಿ ಮುಚ್ಚುವ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇರುವುದು ಬೇಸರದ ಸಂಗತಿ.
ವಿನಾಯಕ ವೃತ್ತದಲ್ಲಿ ಇರುವ ಗುಂಡಿಯಲ್ಲಿ ಅನೇಕ ವಾಹನ ಸವಾರರು ಬಿದ್ದು ಗಾಯಗೊಂಡಿರುವ ಉದಾಹರಣೆ ಇದೆ, ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು,ಇದೇ ರಸ್ತೆಯಲ್ಲಿ ರಾಜ್ಯದ ಗೃಹ ಸಚಿವರು,ಜಿಲ್ಲಾ ಉಸ್ತುವಾರಿ ಸಚಿವರು,ಕ್ಷೇತ್ರದ ಶಾಸಕರು,ಗ್ರಾಪಂ ಪಿಡಿಓ ದಿನ ನಿತ್ಯ ಒಡಾಡುತಿದ್ದರು ಈ ಗುಂಡಿಯ ಮುಚ್ಚಿಸದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.
ಇನ್ನೊಂದು ವಾರದಲ್ಲಿ ಈ ಸಮಸ್ಯೆ ಬಗೆಹರಿಸದಿದ್ದಲ್ಲಿ ಗುಂಡಿ ಬಿದ್ದ ಸ್ಥಳದಲ್ಲಿಯೇ ಕುಳಿತು ಸತ್ಯಾಗ್ರಹ ನಡೆಸುತ್ತೇನೆ ಎಂದು ಈ ಸಂಧರ್ಭದಲ್ಲಿ ಎಚ್ಚರಿಸಿದರು.
ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರಿಗೆ ಸ್ಥಳೀಯ ವರ್ತಕರು ಮತ್ತು ಸಾರ್ವಜನಿಕರು ಬೆಂಬಲ ಸೂಚಿಸಿ ಪ್ರಶಂಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್