ರಿಪ್ಪನ್ ಪೇಟೆ : ಪಟ್ಟಣದಲ್ಲಿ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿದಿದೆ. ವಿನಾಯಕ ವೃತ್ತ ಸೇರಿ ಹಲವೆಡೆ ಚರಂಡಿ ನೀರು ರಸ್ತೆಯ ಮೇಲೆ ಹರಿದಿದ್ದು, ಜನರ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.
ಪಟ್ಟಣದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಶುರುವಾಗಿದ್ದು, ಬಿಡುವು ಕೊಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಪಟ್ಟಣದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧೆಡೆ ಇವತ್ತು ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸಂಜೆ ಮೇಲೆ ಮಳೆಯಾಗುತ್ತಿದೆ. ಬೆಳಿಗ್ಗೆ ಮೋಡ ಕವಿದಿತ್ತು. ಸಂಜೆಯ ನಂತರ ಮಿಂಚು, ಗುಡುಗು ಸಮೇತ ಮಳೆ ಸುರಿಯುತ್ತಿದೆ.ಸಂಜೆ ಮಳೆ ಆರ್ಭಟ ಆರಂಭವಾಗಿ ಸತತವಾಗಿ ಸುರಿಯುತ್ತಿದೆ.
ಭಾರಿ ಮಳೆಯಿಂದಾಗಿ ಶಿವಮೊಗ್ಗದಲ್ಲಿ ಜನ ಮತ್ತು ವಾಹನ ಸಂಚಾರ ಕಷ್ಟಕರವಾಗಿದೆ. ವೀಕೆಂಡ್ ಮೂಡ್’ನಲ್ಲಿದ್ದವರಿಗೆ ಮಳೆ ತಣ್ಣೀರು ಎರಚಿದೆ. ಭಾನುವಾರದ ವ್ಯಾಪಾರಕ್ಕಾಗಿ ಸಿದ್ಧವಾಗಿದ್ದ ಚಾಟ್ಸ್, ತಿಂಡಿ, ತಿನಿಸು ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ.
ಮಲೆನಾಡಿಗರ ಬದುಕು ಮೂರಾಬಟ್ಟೆ ಮಾಡಿದ ಮಳೆ
ಪ್ರಕೃತಿ ವಿರುದ್ಧ ಹೋರಾಡಲು ಶಕ್ತಿ ಇಲ್ಲದ ಮನುಷ್ಯರು ಸಿಕ್ಕ-ಸಿಕ್ಕ ದಾರಿಯಲ್ಲಿ ತಾವು ಬೆಳೆದ ಬೆಳೆಗಳನ್ನು ಉಳಿಸಿಕೊಂಡು ವರ್ಷದ ಬದುಕು ದೂಡಲು ಮುಂದಾಗಿದ್ದಾರೆ. ಈಗಾಗಲೇ ಮಲೆನಾಡಿನಾದ್ಯಂತ ವರುಣ ಅಬ್ಬರಕ್ಕೆ ಮಲೆನಾಡಿಗರ ಬದುಕು ಮೂರಾಬಟ್ಟೆಯಾಗಿದೆ.
ಮಲೆನಾಡಲ್ಲಿ ಜನವರಿಯಿಂದಲೂ ನಿರಂತರ ಮಳೆಯಾಗಿದೆ. ಬೆಳೆ ಗಿಡದಲ್ಲಿ ಇರುವುದಕ್ಕಿಂತ ಮಣ್ಣು ಪಾಲಾಗಿದ್ದೆ ಹೆಚ್ಚು. ಮಳೆ ವಿರುದ್ಧ ತೊಡೆತಟ್ಟಿ ನಿಂತು ಬದುಕುಳಿದಿದ್ದ ಬೆಳೆಗೆ ಈಗ ಸೂರ್ಯದೇವ ಮಗ್ಗಲ ಮುಳ್ಳಾಗಿದ್ದಾನೆ. ವಾಯುಭಾರ ಕುಸಿತದಿಂದ ಮಲೆನಾಡಿನ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಜನ ಬಿಸಿಲು ನೋಡದೆ ವಾರವೇ ಕಳೆದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್