ಭಾರತ ಸರ್ಕಾರದ ಬಹುಮುಖ್ಯ ಉದ್ಯಮದಲ್ಲಿ ಭಾರತೀಯ ರೈಲ್ವೆ ಬಹು ಅಗ್ರಸ್ಥಾನವನ್ನು ಪಡೆದಿದೆ.ಸುರಕ್ಷತೆಯಿಂದ ಹಿಡಿದು ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೀತಿಯ ಅನುಕೂಲಗಳನ್ನು ರೈಲ್ವೆ ಇಲಾಖೆ ಭಾರತೀಯರಿಗೆ ಮಾಡಿಕೊಟ್ಟಿದೆ.
ಆದರೆ ಕೆಲವೊಂದು ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನವೋ ಅಥವಾ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯತನದಿಂದಲೋ ರಸ್ತೆಯಲ್ಲಿ ಪಯಣಿಸುವ ಪ್ರಯಾಣಿಕರಿಗೆ ತೊಂದರೆಯೂ ಆಗುತ್ತಿದೆ.
ಇಂತಹದೇ ಸಮಸ್ಯೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ- ಯಡೇಹಳ್ಳಿ ರೈಲ್ವೇ ಲೆವಲಿಂಗ್ ಕ್ರಾಸ್ ನ ಬಳಿ ರೈಲ್ವೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಹುದೊಡ್ಡ ಉದ್ದನೆಯ ಹಂಪ್ಸ್ ಗಳನ್ನು ಈ ಲೆವಲಿಂಗ್ ಕ್ರಾಸ್ ಬಳಿ ಹಾಕಿರುವುದರಿಂದ ರಸ್ತೆ ಪ್ರಯಾಣಿಕರಿಗೆ ಬಹಳ ತೊಂದರೆಯಾಗುತ್ತಿದೆ.
ಆನಂದಪುರ ಯಡೇಹಳ್ಳಿ ರೈಲ್ವೇ ಲೆವಲಿಂಗ್ ಕ್ರಾಸ್ ಬಳಿ ವಿಪರೀತ ಹಂಪ್ಸ್ ಇದ್ದು ರಸ್ತೆಯು ಸಹ ಕಿತ್ತು ಹೋಗಿರುವುದರಿಂದ ಹಲವು ಅವಘಡಗಳು ಈಗಾಗಲೇ ಸಂಭವಿಸಿದೆ.
ಭಾಗಶ: ಈ ಹಂಪ್ಸ್ ಗಳ ರಸ್ತೆಯೂ ಸಹ ಅಂಕುಡೊಂಕಾಗಿದ್ದು ಕಿತ್ತು ಹೋಗಿದ್ದರಿಂದ ಸಾರ್ವಜನಿಕರು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುವಂತಾಗಿದೆ.
ಆನಂದಪುರ ರೈಲ್ವೆ ವಲಯದಲ್ಲಿ ಹಲವು ಸಮಸ್ಯೆಗಳು:::
ಆನಂದಪುರ ರೈಲ್ವೆ ವಲಯದಲ್ಲಿ ಸಾರ್ವಜನಿಕರಿಗೆ ರೈಲ್ವೆ ಇಲಾಖೆಯ ನಿರ್ಲಕ್ಷ್ಯತನದಿಂದ ಹಲವಾರು ಸಮಸ್ಯೆಗಳಾಗುತ್ತಿವೆ.
ಆನಂದಪುರ ಮುಖ್ಯ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದೆ.ಬೆಳಕಿನ ವ್ಯವಸ್ಥೆಯೂ ಇಲ್ಲದೆ ಚರಂಡಿಯಂತಾಗಿದೆ ರಸ್ತೆಗಳು.
ಆನಂದಪುರ ಯಡೇಹಳ್ಳಿ ರೈಲ್ವೇ ಲೆವಲಿಂಗ್ ಕ್ರಾಸ್ ಬಳಿ ವಿಪರೀತ ಹಂಪ್ಸ್ ಇದ್ದು ರಸ್ತೆಯು ಸಹ ಕಿತ್ತು ಹೋಗಿರುವುದರಿಂದ ಹಲವು ಅವಘಡಗಳು ಈಗಾಗಲೇ ಸಂಭವಿಸಿದೆ.
ಆನಂದಪುರ ಅಂದಾಸುರ ರೈಲ್ವೇ ಲೆವಲಿಂಗ್ ಕ್ರಾಸ್ ನ ಬಳಿ ಕೂಡ ಬಹುದೊಡ್ಡ ಹಂಪಿದ್ದು ರಸ್ತೆಯು ಸಹ ಕಿತ್ತು ಹೋಗಿದೆ ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ.
ಮೇಲ್ಕಂಡ ಎಲ್ಲಾ ಸಮಸ್ಯೆಗಳು ಕೂಡ ಆನಂದಪುರ ರೈಲ್ವೇ ವಿಭಾಗದ ಬಹುದೊಡ್ಡ ಸಮಸ್ಯೆಗಳಾಗಿದ್ದು ಇನ್ನಾದರೂ ಕೂಡ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಸಾರ್ವಜನಿಕರ ಅನುಕೂಲಕ್ಕೆ ಶ್ರಮಿಸಬೇಕೆಂಬುದೇ ನಮ್ಮ ಆಶಯ.
ವರದಿ :ಪವನ್ ಕುಮಾರ್ ಕಠಾರೆ
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್