ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ಪೌರ ಕಾರ್ಮಿಕರ ಮೇಲೆ ಕೆಲವು ಕಿಡಿಗೇಡಿಗಳು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಪೌರ ಕಾರ್ಮಿಕರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಚಿವ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ವಿಲೇವಾರಿ ಮಾಡುವವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪೌರ ಕಾರ್ಮಿಕರು ಜನರ ಸೇವೆ ಮಾಡುತ್ತಾರೆ. ಅವರ ಮೇಲೆ ಹಲ್ಲೆ ಮಾಡುವಷ್ಟರಮಟ್ಟಿಗೆ ದುಷ್ಟರು ಇಳಿದಿದ್ದಾರೆ. ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದರು.ಪೊಲೀಸ್ ಇಲಾಖೆ ನಿರ್ಲಕ್ಷ್ಯ ಭಾವನೆ ತಾಳಬಾರದು. ಯಾರೋ ಒಂದಿಬ್ಬರನ್ನು ಮಾತ್ರ ಬಂಧಿಸಿದ್ದಾರೆ. ಅವರು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಹೀಗೆ ಆಗಬಾರದು, ತಾವೇ ಖುದ್ದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡುವೆ ಎಂದರು.
ಕಸವಿಲೇವಾರಿ ವೇಳೆ 10-12 ಜನ ಹಲ್ಲೆ ನಡೆಸಿದ್ದರು. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಗೆ ಮೊಬೈಲ್ ನಲ್ಲಿ ಕರೆ ಮಾಡಿ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಸೂಚಿಸಿದರು.
ಇನ್ನು ತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿಗಳ ವಿರುದ್ಧ ಸಚಿವ ಕೆ ಎಸ್ ಈಶ್ವರಪ್ಪ ಗರಂ ಆದರು. ತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಏನು ದನ ಕಾಯುತ್ತಿದ್ದಾರ? ಗಾಂಜಾ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ. ಇನ್ನು ಯಾರನ್ನು ಸಹ ಬಂಧಿಸಲು ಆಗಿಲ್ಲ. ನಾನು ಸಂಜೆ ವಾಪಸ್ ಬರುವುದರಲ್ಲಿ ಎಲ್ಲರ ಬಂಧನ ಆಗಬೇಕು ಎಂದು ಖಡಕ್ ಎಚ್ಚರಿಕೆ ನೀಡಿದ ಸಚಿವ ಕೆ ಎಸ್ ಈಶ್ವರಪ್ಪ ಎಸ್ಪಿಗೆ ಮೊಬೈಲ್ ನಲ್ಲಿಯೇ ಸೂಚಿಸಿದರು.
ಶಿವಮೊಗ್ಗದಲ್ಲಿ ಪೌರಕಾರ್ಮಿಕರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿದ್ದರೂ ಅವರ ಮೇಲೆ ಕೆಲವರು ದಬ್ಬಾಳಿಕೆ ಮಾಡುತ್ತಿದ್ದಾರೆ. ಇತ್ತೀಚೆಗೆ ಜೆಪಿ ನಗರದಲ್ಲಿ ಕಸ ಸಂಗ್ರಹಿಸಲು ಹೋಗಿದ್ದ ಪೌರಕಾರ್ಮಿಕರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದೇನೆ. ಹಲ್ಲೆಗೊಳಗಾದ ಕಾರ್ಮಿಕರೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.
ಪೊಲೀಸ್ ಇಲಾಖೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಇದುವರೆಗೂ ಕ್ರಮಕೈಗೊಳ್ಳದೆ ಇಬ್ಬರನ್ನು ಮಾತ್ರ ಬಂಧಿಸಿದ್ದಾರೆ. ಶಿವಮೊಗ್ಗದಲ್ಲಿ ಏನೇನು ನಡೆಯುತ್ತಿದೆ ಎಂದು ಗೊತ್ತಿದೆ. ಪೊಲೀಸ್ ಇಲಾಖೆ ಅಲರ್ಟ್ ಆಗಬೇಕಿದೆ. ಬಗ್ಗೆ ಜಿಲ್ಲೆಯಲ್ಲಿ ಗೂಂಡಾಗಳಿಗೆ, ಗಲಾಟೆ ಮಾಡುವವರಿಗೆ ಯಾವುದೇ ಭಯವಿಲ್ಲದಂತಾಗಿದೆ. ಇಂತಹ ವಾತಾವರಣ ಸರಿ ಮಾಡುವ ದಿಕ್ಕಿನಲ್ಲಿ ಪೊಲೀಸ್ ಇಲಾಖೆ ಕೆಲಸ ಮಾಡಬೇಕು ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್