ಶಿವಮೊಗ್ಗ : ಇಲ್ಲಿನ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೊಬ್ಬ ತಾನು ಸಾಯುವ ದೃಶ್ಯ ತನ್ನ ಮನೆಯವರು ನೋಡಬೇಕೆಂದು ವಿಡಿಯೋ ಕಾಲ್ ಮಾಡಿ, ಅವರ ಸಮ್ಮುಖದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ.
ಕೇಂದ್ರ ಕಾರಾಗೃಹ ವಸತಿ ಗೃಹದಲ್ಲಿ ಅಸ್ಪಾಕ್ ತಗಡಿ (24) ಪತ್ನಿ ಎದುರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಅಸ್ಪಾಕ್ಗೆ ಒಂದು ಮಗು ಕೂಡ ಇದೆ. ಕೇಂದ್ರ ಕಾರಾಗೃಹದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಅಸ್ಪಾಕ್, ಮೇಲಾಧಿಕಾರಿಗಳ ಬಳಿ ಒಳ್ಳೆಯ ಹೆಸರು ಪಡೆದಿದ್ದ.
ಈ ಹಿಂದೆ ಕೆ.ಎಸ್.ಆರ್.ಪಿಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದ ಅಸ್ಪಾಕ್, ಕಳೆದ ಎರಡು ವರ್ಷಗಳಿಂದ ಜೈಲು ವಾರ್ಡರ್ ಆಗಿ ಕೆಲಸ ಮಾಡುತ್ತಿದ್ದ. ಅಸ್ಪಾಕ್ ದಾಂಪತ್ಯದಲ್ಲಿ ಆರಂಭದಲ್ಲಿಯೇ ಬಿರುಕು ಕಾಣಿಸಿಕೊಂಡಿದೆ.
ಅಸ್ಪಾಕ್ ಪತ್ನಿ ಸಂಸಾರದಲ್ಲಾದ ಜಗಳದ ಹಿನ್ನಲೆಯಲ್ಲಿ ತವರು ಮನೆ ಸೇರಿಕೊಂಡಿದ್ದಳು. ನೆನ್ನೆ ಸಂಜೆ ಅಸ್ಪಾಕ್ ತನ್ನ ಪತ್ನಿ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದಾನೆ.ಆ ಸಂದರ್ಭದಲ್ಲಿ ಪತ್ನಿಯ ತಂದೆ ತಾಯಿ ಕೂಡ ಅಸ್ಪಾಕ್ ಜೊತೆ ವಾಗ್ವಾದಕ್ಕಿಳಿದ್ದಾರೆ. ವಿಡಿಯೋ ಕಾಲ್ ನಲ್ಲಿಯೇ ಜಗಳ ಜೋರಾಗಿ ನಡೆದಿದೆ. ಹತಾಶಗೊಂಡ ಅಸ್ಪಾಕ್ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ.
ಇಂದು ಕಿಟಕಿ ಬಳಿ ಮೊಬೈಲ್ ಇಟ್ಟು ತಾನು ಆತ್ಮಹತ್ಯೆ ಮಾಡಿಕೊಳ್ಳುವ ದೃಷ್ಯವನ್ನು ಲೈವ್ ಆಗಿ ಪತ್ನಿ ಮತ್ತು ಅತ್ತೆ ಮಾವನಿಗೆ ತೋರಿಸಿದ್ದಾನೆ.
ಪತಿ ಕಣ್ಣೆದುರೇ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದಂತೆ ಇತ್ತ ಪತ್ನಿ ಶಿವಮೊಗ್ಗದ ಕಾರಾಗೃಹದ ಹಿರಿಯ ಅಧಿಕಾರಿಗಳಿಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾರೆ.ತಕ್ಷಣ ವಸತಿ ಗೃಹದಲ್ಲಿದ್ದ ಇತರೆ ಸಿಬ್ಬಂದಿಗಳು ಮನೆ ಬಾಗಿಲು ಒಡೆದು ಹೋಗುವಷ್ಟರಲ್ಲಿ ಅಸ್ಪಾಕ್ ಪ್ರಾಣಪಕ್ಷಿ ಹಾರಿ ಹೋಗಿತ್ತು.
ನಿನ್ನೆ ಸಹೋದ್ಯೋಗಿ ಒಬ್ಬರ ಬರ್ತ್ಡೇಯಲ್ಲಿ ಪಾಲ್ಗೊಂಡಿದ್ದ ಅಸ್ಪಾಕ್ ಬಳಿಕ 8 ಗಂಟೆಗೆ ಮನೆಗೆ ತೆರಳಿದ್ದಾನೆ. ಈ ವೇಳೆ ಪತ್ನಿಯ ಜೊತೆ ವಿಡಿಯೋ ಕಾಲ್ನಲ್ಲಿ ಮಾತುಕತೆ ಆರಂಭವಾಗಿದ್ದು, ಮಾತುಕತೆ ಜಗಳಕ್ಕೆ ತಿರುಗಿದೆ.
ಪತಿ ಕಣ್ಣೆದುರುನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಣ್ಣಾರೆ ಕಂಡ ಪತ್ನಿ ಆಘಾತಕ್ಕೊಳಗಾಗಿದ್ದಾರೆ.
ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್