ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ.
ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು ಹೊತ್ತು ಕಳೆದಿದ್ದರು. ಅದನ್ನು ಮುದ್ದಾಡಿದ್ದರು. ಹಾಗಾಗಿ ಅವರ ಹೆಸರನ್ನೆ ಆನೆಗೆ ಇಡಲಾಗಿದೆ.
‘ಆನೆಗೆ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗುತ್ತಿದೆ’ ಎಂದು ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್ಒ ಐ.ಎಂ.ನಾಗರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ವೀನಿಂಗ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸಕ್ರೆಬೈಲು ಬಿಡಾರಕ್ಕೆ ಇವತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು.
ನೇತ್ರಾವತಿ ಮತ್ತು ಅದರ ಮರಿ ಪುನೀತ್ ಇವತ್ತಿನಿಂದ ದೂರ ದೂರ ಉಳಿಯಬೇಕಿದೆ. ಈವರೆಗೂ ತಾಯಿ ಹಾಲು ಕುಡಿಯಲು ಮರಿ ಆನೆಗೆ ಅವಕಾಶವಿತ್ತು. ಆದರೆ ಇನ್ಮುಂದೆ ಮರಿ ಆನೆ ಪುನೀತ್, ಸ್ವತಂತ್ರವಾಗಿ ಬದುಕಬೇಕಿದೆ. ಹಾಗಾಗಿ ತಾಯಿ ಮತ್ತು ಮರಿಯನ್ನು ಬೇರ್ಪಡಿಸಲಾಗುತ್ತದೆ. ಈ ಪ್ರಕ್ರಿಯೆಯನ್ನು ವೀನಿಂಗ್ ಎಂದು ಕರೆಯಲಾಗುತ್ತದೆ.
ತಾಯಿ ಆನೆಯನ್ನು ಕಾಡಿನಲ್ಲಿ ಬಿಡಲಾಗುತ್ತದೆ. ಮರಿ ಆನೆಯನ್ನು ಬಿಡಾರದಲ್ಲಿ ಕಟ್ಟಲಾಗುತ್ತದೆ. ಆದರೆ ತಾಯಿ ಜೊತೆಗೆ ಬೆರೆಯಲು, ಹಾಲು ಕುಡಿಯುವಂತಿಲ್ಲ. ಬಿಡಾರದ ಉಳಿದ ಆನೆಗಳಿಗೆ ನೀಡುವ ಆಹಾರವನ್ನೇ ಮರಿ ಆನೆ ಪುನೀತ್’ಗೂ ನೀಡಲಾಗುತ್ತದೆ. ವೀನಿಂಗ್ ಪ್ರಕ್ರಿಯೆ ಇವತ್ತು ಆರಂಭವಾಗಿದ್ದು, ಹಂತ ಹಂತವಾಗಿ ಮರಿಯಾನೆಯನ್ನು ತರಬೇತುಗೊಳಿಸಲಾಗುತ್ತದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್