Breaking
13 Jan 2026, Tue

ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ ನುಡಿನಮನ ಕಾರ್ಯಕ್ರಮ :

ರಿಪ್ಪನ್ ಪೇಟೆ: ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ ಡಾ.ಜಿ. ಡಿ. ನಾರಾಯಣಪ್ಪ ಹೇಳಿದರು.
ಸರಕಾರಿ ಪದವಿ ಪೂರ್ವ ಕಾಲೇಜು ಅಮೃತ ಮತ್ತು ಅಮೃತ ಗ್ರಾಮಸ್ಥರು ಶನಿವಾರ ದಿವಂಗತ  ಜಿ. ಎಸ್.ಗಣೇಶ್ ಮೂರ್ತಿ ಪ್ರಾಚಾರ್ಯರು ಮತ್ತು ಶಿಕ್ಷಣತಜ್ಞರು ಮತ್ತು ಎಂ.ಹೆಚ್.ಪ್ರಕಾಶ್ ಪ್ರಾಚಾರ್ಯರು ರ ವರಿಗೆ  ಆಯೋಜಿಸಲಾಗಿದ್ದ  ಭಾವಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಲೆನಾಡಿನ ಶಿವಮೊಗ್ಗ ಜಿಲ್ಲೆಯ ತೀರ್ಥಳ್ಳಿ ಹಾಗೂ ಹೊಸನಗರ ತಾಲೂಕಿನ ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂದು ಹಗಲಿರುಳು ಶ್ರ ಮಿಸು ವುದರ ಮೂಲಕ ಅವರುಗಳ ಶೈಕ್ಷಣಿಕ ಜೀವನಕ್ಕೆ ದಾರಿದೀಪ ವಾಗಿದ್ದರು. ಸಮಾಜಸೇವೆಯಲ್ಲಿ ಶೈಕ್ಷಣಿಕ ಸೇವೆ ಅತ್ಯುತ್ತಮ ಸೇವೆಯಾಗಿದೆ ಎಂದು ನಂಬಿದ್ದ ಅವರು ತಮ್ಮ ಜೀವಿತದ ಕೊನೆಯ ಗಳಿಗೆಯಲ್ಲಿಯೂ ಶೈಕ್ಷಣಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.ಅವರ ಅಕಾಲಿಕ ನಿಧನ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಅಮೃತ ಕಾಲೇಜಿನ ನಿವೃತ್ತ ಪ್ರಾಚಾರ್ಯ ಶೇಖರ್  ಗೌಳೆರ್  ಆಕಾಲಿಕವಾಗಿ  ಮೃತರಾದ  ಪ್ರಾಚಾರ್ಯ ಎಂ. ಎಚ್. ಪ್ರಕಾಶ್ ರವರ ಕುರಿತು ಮಾತನಾಡಿ  ನಡೆ ನುಡಿಗಳಲ್ಲಿ ನೇರ ವ್ಯಕ್ತಿತ್ವ  ಮತ್ತು ಕರ್ತವ್ಯ  ನಿಷ್ಠೆಯ  ಮೂಲಕ ವಿದ್ಯಾರ್ಥಿಗಳ  ಮತ್ತು ಉಪನ್ಯಾಸಕ ರ  ಜನಮಾನಸದಲ್ಲಿ ಉಳಿದುಕೊಂಡಿರುವ ವ್ಯಕ್ತಿಯಾಗಿದ್ದರು. ಅವರ ಆಕಾಲಿಕ  ಮರಣ  ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ  ತುಂಬಲಾರದ  ನಷ್ಟವಾಗಿದೆ  ಎಂದರು.
ರಾಷ್ಟ್ರೀಯ ಶಿಕ್ಷಣ  ಸಂಸ್ಥೆಯ  ಕಾರ್ಯದರ್ಶಿ  ಜಿ. ಎಸ್. ನಾರಾಯಣರಾವ್. ಶಿಕ್ಷಣ ತಜ್ಞ  ದಿವಂಗತ ಗಣೇಶ್ ಮೂರ್ತಿ ಕುರಿತು ಮಾತನಾಡಿದರು.
 ಕಾರ್ಯಕ್ರಮದಲ್ಲಿ ವತ್ಸಲಾ ಗಣೇಶಮೂರ್ತಿ ಸುಧಾ ಪ್ರಕಾಶ್  ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ. ಸೋಮಶೇಖರ ಟಿ.ಡಿ ಕಾರ್ಯಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ.ಗ್ರಾಮ ಪಂಚಾಯಿತಿ ಅಧ್ಯಕ್ಷರು.ಸದಸ್ಯರು. ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿಗಳು. ಅಮೃತ ಗ್ರಾಮದ ಗ್ರಾಮಸ್ಥರು. ದಿವಂಗತ ಹೆಚ್.ಎಸ್ ಗಣೇಶ್ ಮೂರ್ತಿ .ಮತ್ತು ಎಂ. ಹೆಚ್.ಪ್ರಕಾಶ್  ಕುಟುಂಬಗಳ  ಸದಸ್ಯರುಗಳು ಭಾಗವಹಿಸಿದ್ದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *