ಸಾಗರ : ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ , 150 ಲೀ ಬೆಲ್ಲದ ಕೊಳೆ ವಶ

ಸಾಗರ : ಅಕ್ರಮವಾಗಿ ಕಳ್ಳ ಭಟ್ಟಿ ಸಾರಾಯಿ ತಯಾರಿಕೆಗೆ ಬಳಸುವ ಬೆಲ್ಲ ಕೊಳೆಯನ್ನು ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಸಾಗರ ತಾಲೂಕಿನ ಸುಳ್ಳೂರು ಗ್ರಾಮದಲ್ಲಿ ನಡೆದಿದೆ. ಈ ವೇಳೆ ಹೊಲದಲ್ಲಿ ಸಂಗ್ರಹಿಸಿದ್ದ 150 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಳ್ಳೂರು ಗ್ರಾಮದ ಕಾಳಿ ಕಟ್ಟೆ ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆಗೆ ಸಂಗ್ರಹಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಲಕ್ಷಣ ಬಿನ್ ಬಸಪ್ಪ…

Read More

ರಿಪ್ಪನ್ ಪೇಟೆಯ ರೈತನ ಮಗನ ಚಿನ್ನದ ಬೇಟೆ ! ಗ್ರಾಮೀಣ ಯುವಕ ಚಿನ್ನ ಬೇಟೆಯಾಡಿದ್ದಾದರೂ ಎಲ್ಲಿ ? ಈ ಯುವಕನಿಗೆ ಕೃಷಿಸಚಿವ ಬಿ ಸಿ ಪಾಟೀಲ್ ಕಿವಿಯಲ್ಲಿ ಹೇಳಿದ್ದೇನು !!

ರಿಪ್ಪನ್ ಪೇಟೆ : ಪುಟ್ಟ ಹಳ್ಳಿಯಲ್ಲಿ ಅಪ್ಪ ಅಮ್ಮ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಅತ್ತ ಮಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡ್ಡುತ್ತಿದ್ದ.  ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ರಿಪ್ಪನ್ ಪೇಟೆಯ ಸಮೀಪದ ಹೊಸಮನೆಯ ಕೃಷಿಕ ದಂಪತಿಗಳಾದ ಸರಸ್ವತಿ ಮತ್ತು ಮಂಜುನಾಥ್ ರವರ ಪುತ್ರ ಮಧುಸೂದನ್ ಎಂ. ಬೆಂಗಳೂರಿನ ಕೃಷಿ ವಿಶ್ವ ವಿದ್ಯಾಲಯದ  ಘಟಿಕೋತ್ಸವದ ಪದವಿ ಪ್ರದಾನ ಸಮಾರಂಭದಲ್ಲಿ ಈ ಹಳ್ಳಿಯ ಪ್ರತಿಭೆ ಬರೋಬ್ಬರಿ ಮೂರು ಚಿನ್ನದ ಪದಕಗಳನ್ನು ಬಾಚಿದ್ದಾನೆ. ಬೆಂಗಳೂರು…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವು

ಶಿಕಾರಿಪುರ : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕನೋರ್ವನಿಗೆ ಹೋರಿ ತಿವಿದು ಮೃತಪಟ್ಟಿರುವ  ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ನಿವಾಸಿ ರಾಕೇಶ್ (25) ಎಂದು ಗುರುತಿಸಲಾಗಿದೆ. ಜಿಲ್ಲೆಯ ಹಲವೆಡೆಗಳಲ್ಲಿ ದೀಪಾವಳಿ ಹಬ್ಬದ ನಂತರ ಹೋರಿ ಬೆದರಿಸುವ ಸ್ಪರ್ಧೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ ಕೋವಿಡ್-19 ಭೀತಿ ಹಾಗೂ ಕಳೆದ ಎರಡು ವರ್ಷದ ಹಿಂದೆ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಜಿಲ್ಲೆಯಲ್ಲಿ ಮೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗಾಗಿಯೇ ಜಿಲ್ಲಾಡಳಿತ…

Read More

ಶಿವಮೊಗ್ಗಕ್ಕೆ ಆಗಮಿಸಿದ್ದ ನಟ ರಮೇಶ್ ಅರವಿಂದ್ : ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

ಶಿವಮೊಗ್ಗ : ನಟ, ನಿರ್ದೇಶಕ ರಮೇಶ್ ಅರವಿಂದ್ ಇಂದು ಶಿವಮೊಗ್ಗದ ಶೋ ರೂಂ ಉದ್ಘಾಟನೆಗಾಗಿ ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಫ್ಯಾನ್ಸ್ ಗಳು ಮುಗಿಬಿದ್ದರು.  ಶೋ ರೂಂ ಉದ್ಘಾಟನೆ ನಂತರ ಮಾಧ್ಯಮದ ಜೊತೆ ಮಾತನಾಡಿ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತೀ ದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ನಮ್ಮೆಲ್ಲರೊಂದಿಗೆ ಅವರ ನೆನಪುಗಳಿವೆ. ನ. 16 ರಂದು ಅಪ್ಪು ವಿಗೆ ವಾಣಿಜ್ಯ ಮಂಡಳಿಯಿಂದ ನಮನ ಸಲ್ಲಿಸುವ ಕಾರ್ಯಕ್ರಮ ಇದೆ ಎಂದರು.  ಇನ್ನು ಬಿಡುಗಡೆಗೆ ಸಿದ್ದವಾಗಿರುವ…

Read More

ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

  ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. 02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ…

Read More

ಶವ ಸಾಗಿಸಲು ರಸ್ತೆ ಸಂಪರ್ಕ ಇಲ್ಲದೆ ಮೌನಿಯಾಯಿತೆ ಬಡ ಕುಟುಂಬ ? ಗೌತಮಪುರ ದಲ್ಲೊಂದು ಹೃದಯ ವಿದ್ರಾವಕ ಘಟನೆ!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮ ಇದೀಗ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಯಿತು. ಬಲಿಪಾಡ್ಯಮಿಯ ದಿನ ನಿನ್ನೆ ರಾಜಮ್ಮ 70  ವರ್ಷ ವಯೋ ಸಹಜತೆಯಿಂದ ಸಾವಿಗೀಡಾಗಿದ್ದಾರೆ  ಸುಮಾರು ಇಪ್ಪತ್ತು ವರ್ಷದಿಂದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ರಸ್ತೆ ತಡೆ ಹಾಕಿದ್ದು ನಂತರ  ಗ್ರಾಮಸಭೆಯಲ್ಲಿ ತೀರ್ಮಾನವಾದರೂ  ರಸ್ತೆ ತೆರವುಗೊಳಿಸಲು ಆದೇಶ ನೀಡಿದ್ದರೂ ಗ್ರಾಮಾಡಳಿತವಾಗಲಿ ಅಥವಾ ತಾಲ್ಲೂಕು ಆಡಳಿತವಾಗಲೀ ಈ ಕೆಲಸಕ್ಕೆ ಮುಂದಾಗಲಿಲ್ಲ. ಇದರ ಪರಿಣಾಮ ರಾಜಮ್ಮ ಮರಣಹೊಂದಿ 24 ಘಂಟೆ ಯಾದರೂ ಕೂಡ ಶವ ಸಾಗಿಸಲು…

Read More

ಸ್ಕೂಟಿ ಹಾಗೂ ಬಸ್ ನಡುವೆ ಭೀಕರ ಅಪಘಾತ : ಇಬ್ಬರ ಸಾವು

  ಶಿವಮೊಗ್ಗ : ಮಾಚೇನಹಳ್ಳಿಯ ಶಿಮುಲ್ ಡೈರಿ ಎದುರುಗಡೆ ಕೆಎಸ್ ಆರ್ ಟಿ ಸಿ ಬಸ್  ಸ್ಕೂಟಿಗೆ  ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿರುವ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನ ಭದ್ರಾವತಿ ಕಡೆಯಿಂದ ಡೈರಿ ಹಿಂಭಾಗದ ಜಯಂತಿ ಗ್ರಾಮಕ್ಕೆ ತಿರುಗುವ ವೇಳೆ ದ್ವಿಚಕ್ರ ವಾಹನಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸವಾರಾದ ಮಂಜುನಾಥ್ (25) ಹಾಗೂ ಆಂಥೋಣಿ ಎಂಬುವರು ಸ್ಥಳದಲ್ಲಿಯೇ…

Read More

ದೀಪಾವಳಿ ನೋನಿಗೆ ಸಾವಿರ ಹಣ್ಣು ಕಾಯಿ ನೈವೇದ್ಯ ಬಯಸುವ ಮಲೆನಾಡಿನ ದೈವ ! ಹಾಗಾದರೆ ಇದು ಯಾವ ಗ್ರಾಮದ ದೇವತೆ ? ಒಮ್ಮೆ ಈ ಸುದ್ದಿ ನೋಡಿ

ಬೆಳಕಿನ ಹಬ್ಬ ದೀಪಾವಳಿ ಎಂದರೆ ಅದೇನೋ ಸಡಗರ ಅದೆಷ್ಟೋ ಸಂಭ್ರಮ ಮಲೆನಾಡಿನಲ್ಲಂತೂ ಹಬ್ಬದ ಸಡಗರ ಸಂಭ್ರಮ ಹೇಳತೀರದು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಐಗಿನಬೈಲು ಗ್ರಾಮದಲ್ಲಿ ಗಾಮೇಶ್ವರ ದೈವವು ವಿಶಿಷ್ಟವಾದಂತಹ  ಶಕ್ತಿಯನ್ನು ಹೊಂದಿದ್ದು ಪ್ರತಿ ವರ್ಷವೂ ನೋನಿ ಹಬ್ಬದಂದು ಈ ದೈವಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.ನೂರಾರು  ವರ್ಷಗಳ ಇತಿಹಾಸವಿರುವ   ಈ ಗಾಮೇಶ್ವರ ದೈವ ವೃಕ್ಷಕ್ಕೆ ಗ್ರಾಮದ ಪ್ರತಿ ಕುಟುಂಬದ ಪುರುಷರು ಉಪವಾಸ ವ್ರತದೊಂದಿಗೆ ಆಗಮಿಸಿ ದೈವಕ್ಕೆ ನಮಿಸಿ ಸಾವಿರಾರು ಹಣ್ಣುಕಾಯಿ ಸಮಪಿ೯ಸುವಂತಹ ಪ್ರತೀತಿಯಿದೆ.  ಐಗಿನಬೈಲು…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಇಂದು ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಇಂದು ಲಕ್ಷ್ಮಿ ಪೂಜೆ ನೆರವೇರಿಸಲಾಗುತ್ತಿದೆ. ಅಂಗಡಿಗಳು, ಶೋರೂಮ್ ಗಳು, ಗ್ಯಾರೇಜ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಇಂದು ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ, ಬಟ್ಟೆ ಅಂಗಡಿಗಳು, ಪಟಾಕಿ ಸ್ಟಾಲ್…

Read More