Headlines

ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ಬಿಜೆಪಿಗೆ ಸೇರ್ಪಡೆ:

ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪ ರವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.  ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರುವ ವಾರ್ಡ್ ನಂಬರ್ 1 ರಿಂದ ಆಯ್ಕೆಯಾದ ಮಹಾಲಕ್ಷ್ಮಿ ಅಣ್ಣಪ್ಪ. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿಗ ಸದಸ್ಯರಿಂದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇಂದು ಸಾಗರದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗೃಹಮಂತ್ರಿ ಆರಗ ಜ್ಞಾನೇಂದ್ರ. ಸಾಗರ ಹೊಸನಗರ…

Read More

ಮನೆ ಕಳ್ಳರ ಹೆಡೆಮುರಿ ಕಟ್ಟಿದ ಮಾಳೂರು ಪೊಲೀಸರು ! ಐವರು ಅರೆಸ್ಟ್ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದ ಡಿ ದರ್ಜೆ ನೌಕರನ ಮನೆಯಲ್ಲಿ  2 ತಿಂಗಳ ಹಿಂದೆ ನಡೆದಿದ್ದ ಮನೆ ಕನ್ನತನ ಪ್ರಕರಣವನ್ನ ಪೊಲೀಸರು ಬೇಧಿಸಿ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಣಗೆರೆ ಕಟ್ಟೆಯ ಭೂತಪ್ಪ ಚೌಡಮ್ಮ ಸೌಯದ್ ಸೌದತ್ ದೇವಸ್ಥಾನದಲ್ಲಿ ಡಿ ದರ್ಜೆ ನೌಕರರಾದ ಸೀನಪ್ಪ ಎಂಬುವರು ಪುರದಾಳಿಗೆ ಹೋದಾಗ ಒಟ್ಟು 250 ಗ್ರಾಂ ಚಿನ್ನ, 40 ಗ್ರಾಂ ಬೆಳ್ಳಿ ಹಾಗೂ 2100 ನಗದು ಕಳವಾಗಿತ್ತು. ಈ ಪ್ರಕರಣ ಪೊಲೀಸರಿಗೆ ಸವಾಲು…

Read More

ಕಾರು ಡಿಕ್ಕಿಯಾಗಿ ಬಾಲಕ ಸಾವು :ನಡು ರಸ್ತೆಯಲ್ಲೆ ಶವವಿಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚುತ್ತಿದ್ದು ವಾಹನ ವೇಗ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕುಂಸಿ ಗ್ರಾಮಸ್ಥರು ಗುರುವಾರ ಅಪಘಾತದಿಂದ ಮೃತಪಟ್ಟ ಬಾಲಕನ ಶವವಿಟ್ಟು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ ಸಾಗರ ಕಡೆಯಿಂದ ಬರುತ್ತಿದ್ದ ಕಾರು ಶಾಲೆಯಿಂದ ವಾಪಸು ಮನೆಗೆ ಬರುತ್ತಿದ್ದ ಕುಂಸಿ ಗ್ರಾಮದ ಚಿಕ್ಕಣ್ಣ ದಂಪತಿಗಳ ಪುತ್ರ 9 ವರ್ಷದ ಬಾಲಕ ವೇಣುಗೋಪಾಲ್‌ಗೆ ಡಿಕ್ಕಿ ಹೊಡೆದಿತ್ತು.  ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ…

Read More

ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ  ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ  ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ  ಪಾಸ್ ತೋರಿಸಿದರೂ ಆದರೆ ಈ…

Read More

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ…

Read More

ಅಕಾಲಿಕ ಮಳೆಗೆ ಬ್ಯಾಡರಕೊಪ್ಪದಲ್ಲಿ ಬಿದ್ದ ಮನೆಗೆ ಶಾಸಕ ಹೆಚ್ ಹರತಾಳು ಹಾಲಪ್ಪ ಭೇಟಿ. ತತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ !!

ರಾಜ್ಯದಲ್ಲಿ ಅಕಾಲಿಕ ಮಳೆಗೆ ಇದೀಗ ರಾಜ್ಯವೇ ತತ್ತರಿಸಿದೆ. ಮಳೆಯ ಅವಾಂತರ ಸೃಷ್ಟಿಸಿದ ಅವಾಂತರ ಒಂದೆರಡಲ್ಲ.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹೊಸೂರು ಗ್ರಾ.ಪಂ ಬ್ಯಾಡರಕೊಪ್ಪದ ಹನುಮಮ್ಮ ರಂಗೇಗೌಡ ಇವರ ಮನೆ ಕುಸಿದು ಹಾನಿಗೊಳಗಾಗಿದ್ದು.ಸಂಪೂರ್ಣ ಕುಟುಂಬವೇ ಪರಿತಪಿಸುವಂತಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸರ್ಕಾರದಿಂದ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡಿದರು.ಕೂಡಲೇ ಸಂಬಂದ ಪಟ್ಟ ಅಧಿಕಾರಿಗಳಿಗೆ ಸ್ಥಳದಿಂದಲೇ ಕರೆ ಮಾಡಿದ…

Read More

ಹೊಸಮನೆ ಪೊಲೀಸ್ ಠಾಣೆಯ ಪೇದೆಯ ವಿರುದ್ದ ಮಹಿಳೆಯಿಂದ ದೂರು ದಾಖಲು :

ಹೊಸಮನೆ ಪೊಲೀಸ್ ಠಾಣೆಯ ಪೇದೆಯೋರ್ವನ ವಿರುದ್ಧ ಮಹಿಳೆಯೋರ್ವರು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 10 ವರ್ಷದಿಂದ ನನ್ನೊಂದಿಗೆ ಮದುವೆ ಇಲ್ಲದೆ ಸಂಸಾರ ನಡೆಸಿ ಈಗ ಮತ್ತೊಂದು ಮಹಿಳೆಯನ್ನ ಮದುವೆಯಾಗುವುದಾಗಿ ಎಂಗೇಜ್ ಮೆಂಟ್ ಮಾಡಿಕೊಂಡು ನನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಎಫ್ ಐ ಆರ್‌ ದಾಖಲಿಸಿದ್ದಾರೆ. ಹೊಸಮನೆ ಠಾಣೆಯ ಕೆಲಸ ಮಾಡುವ ಮಕ್ಸದ್ ಖಾನ್ ವಿರುದ್ಧ ಜಯಶ್ರೀ ವೃತ್ತದ ಮೊದಲನೇ ತಿರುವಿನ ನಿವಾಸಿ ಆಯೇಷಾ ಕೌಸರ್ ಎಂಬ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಅಬ್ದುಲ್…

Read More

ಜೋಗ ಜಲಪಾತ, ಹುಲಿ ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ :: ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು. ರಾಜ್ಯಪಾಲ…

Read More

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷತನ ಅರಳಗೋಡು ಸಮೀಪದ ಮಂಡವಳ್ಳಿ ಗ್ರಾಮದ 9 ಜನರ ಮನೆಯ ವೈರಿಂಗ್ ಸಂಪೂರ್ಣ ಸುಟ್ಟು ಭಸ್ಮ !!!

ಸಾಗರ ತಾಲ್ಲೂಕು ಬಾರಂಗಿ ಹೋಬಳಿ ವ್ಯಾಪ್ತಿಯ ಅರಳಗೋಡು ಗ್ರಾಮ ಪಂಚಾಯತ್​ನ ಮಂಡವಳ್ಳಿ ಗ್ರಾಮದ 9 ಮನೆಗಳ ವೈರಿಂಗ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ವಿವರ ಮಂಡವಳ್ಳಿ ಗ್ರಾಮದ ಆಚೆಕೊಪ್ಪದಲ್ಲಿ ಸಿಂಗಲ್​ ಫೇಸ್​ ಲೈನ್​ ಮೊದಲಿನಿಂದಲೂ ಇದೆ. ಈ ಲೈನ್​ ಹಾದು ಹೋಗಿರುವ ಕಂಬದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ತ್ರಿ ಫೇಸ್​ ಲೈನ್​ ಕೂಡ ಅಳವಡಿಸಲಾಗಿದ್ದುಇದು ಅಪಾಯಕಾರಿಯಾಗಿದ್ದರಿಂದ ಗ್ರಾಮಸ್ಥರು ಪಂಚಾಯಿತಿ ಮೂಲಕ ಮೆಸ್ಕಾಂ ಅಧಿಕಾರಿಗಳಿಗೆ ದುರಸ್ಥಿ ಮಾಡಿಕೊಡುವಂತೆ ಮನವಿ ಮಾಡಿರುತ್ತಾರೆ.  ಒಂದಕ್ಕೊಂದು ತಾಗುವಂತೆ ಲೈನ್ ಹೋಗಿದ್ದು ಏನಾದರೂ…

Read More