Headlines

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ಕಸಾಪ ಜಿಲ್ಲಾಧ್ಯಕ್ಷರಾಗಿ ಡಿ ಮಂಜುನಾಥ್ ಆಯ್ಕೆ ಹಿನ್ನಲೆ ರಿಪ್ಪನ್ ಪೇಟೆ ಸಾಹಿತ್ಯಾಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ : ಸಾಹಿತ್ಯ ಪೋಷಕರಾದ ಹಿರಿಯ ಪತ್ರಕರ್ತ ಹಾಗೂ ಹಿರಿಯ ಸಾಹಿತಿಗೆ ಸನ್ಮಾನ

ರಿಪ್ಪನ್ ಪೇಟೆ :  ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಡಿ ಮಂಜುನಾಥ್ ಅವರು ಆಯ್ಕೆಯಾಗಿರುವುದಕ್ಕೆ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನ್ನಡ ಸಾಹಿತ್ಯ ಅಭಿಮಾನಿಗಳು ಪಟಾಕಿ ಸಿಡಿಸುವುದರ ಮೂಲಕ ಸಂಭ್ರಮ ಆಚರಿಸಿದರು ಕನ್ನಡ ನಾಡು-ನುಡಿಗೆ ಅನೇಕ ವಿನೂತನ ಕಾರ್ಯಕ್ರಮವನ್ನು ಅಧಿಕಾರವಿಲ್ಲದೆ  ಡಿ ಮಂಜುನಾಥ್ ಅವರ ಸೇವೆ ಹಾಗೂ ಕಾರ್ಯ ಶ್ಲಾಘನೀಯ ಹಾಗೇಯೆ ಅವರು ಜಿಲ್ಲಾ ಕಸಪಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಪಟ್ಟಣದ ಸಾಹಿತ್ಯ ಅಭಿಮಾನಿಗಳು ಸಂತೋಷವನ್ನು ವ್ಯಕ್ತಪಡಿಸಿ ಪಟಾಕಿ ಸಿಡಿಸಿ ಸಂಭ್ರಮ…

Read More

ಶಿವಮೊಗ್ಗ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳ ವಿವರ :

ಶಿವಮೊಗ್ಗ : ಬಹಳ ಕುತೂಹಲ ಹುಟ್ಟಿಸಿದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಡಿ.ಮಂಜುನಾಥ್ ಜಯಭೇರಿ ಗಳಿಸಿದ್ದಾರೆ. ಇದರಿಂದ 4 ನೇ ಬಾರಿಗೆ ಕಸಾಪ ಜಿಲ್ಲಾಧ್ಯಕ್ಷರಾಗುತ್ತಿದ್ದಾರೆ. ಸುಮಾರು 450 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ತಮ್ಮ ಪ್ರತಿಸ್ಪರ್ಧಿ ಡಿ.ಬಿ.ಶಂಕರಪ್ಪರವರನ್ನ ಸೋಲಿಸಿ ಡಿ ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ. ತಾಲೂಕುವಾರು ಪಟ್ಟಿ: ಸೊರಬ:ಡಿ. ಮಂಜುನಾಥ್ – 179,ಶಂಕರಪ್ಪ – 129 ಸಾಗರ:ಡಿ ಮಂಜುನಾಥ್ – 391,ಶಂಕರಪ್ಪ – 194 ಶಿವಮೊಗ್ಗ:ಡಿ ಮಂಜುನಾಥ್ – 286,ಶಂಕರಪ್ಪ – 256 ತೀರ್ಥಹಳ್ಳಿ :ಡಿ.ಮಂಜುನಾಥ್…

Read More

ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ :

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆ. ಡಿ ಮಂಜುನಾಥ್ ಅವರು ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಡಿ.ಬಿ. ಶಂಕರಪ್ಪ ಇವರನ್ನು ಪರಾಭವ ಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Read More

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

ವಿಧಾನ ಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಡಿ ಎಸ್​ ಅರುಣ್

ಶಿವಮೊಗ್ಗ :  ಶಿವಮೊಗ್ಗದಲ್ಲಿ ವಿಧಾನಪರಿಷತ್​ ಚುನಾವಣಾ ಕಣ ರಂಗೇರಿದೆ. ಇಂದು ಬಿಜೆಪಿ ಪಕ್ಷದಿಂದ ಮಾಜಿ ಸಭಾಪತಿ ಡಿ.ಎಸ್.ಶಂಕರಮೂರ್ತಿರವರ ಪುತ್ರ ಡಿ.ಎಸ್.ಅರುಣ್ ರವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದ ಕಾರ್ಯಕರ್ತನೆಂಬ ಹೆಮ್ಮೆಯಿಂದ ಚುನಾವಣಾ ಕಣಕ್ಕೆ ಇಳಿದಿದ್ದೇವೆ. ಪಕ್ಷದ ಹಿರಿಯರ, ಜನಪ್ರತಿನಿಧಿಗಳ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪನವರ ಆಶೀರ್ವಾದದೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಕಳೆದ 16 ವರ್ಷಗಳಿಂದ ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ…

Read More

ಜಿಲ್ಲೆಯಲ್ಲಿ ಚುರುಕುಗೊಂಡ ಮತದಾನ : ಸಂಜೆಯೇ ಫಲಿತಾಂಶ ಘೋಷಣೆ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇವತ್ತು ಸಂಜೆ ವೇಳೆಗೆ ಕಸಾಪ ಶಿವಮೊಗ್ಗ ಘಟಕದ ನೂತನ ಸಾರಥಿ ಯಾರು ಅನ್ನುವುದು ಗೊತ್ತಾಗಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ 12 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಿಕಾರಿಪುರದಲ್ಲಿ 4, ಶಿವಮೊಗ್ಗದಲ್ಲಿ 3, ಉಳಿದ ತಾಲೂಕುಗಳಲ್ಲಿ ತಲಾ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿದೆ. 9,143 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 2811 ಮತದಾರರಿದ್ದಾರೆ. ಭದ್ರಾವತಿಯಲ್ಲಿ 1202, ತೀರ್ಥಹಳ್ಳಿಯಲ್ಲಿ 730,…

Read More

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More